HEALTH TIPS

ಕೇಂದ್ರ ಸರ್ಕಾರದ ಅಮೃತ್ ಯೋಜನೆ 10ನೇ ವರ್ಷಕ್ಕೆ: 6.85 ಕೋಟಿ ಜನರಿಗೆ ನೆರವಾಗಿದೆ: ಕೇಂದ್ರ ಸಚಿವ ಜೆ.ಪಿ. ನಡ್ಡಾ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಜಾರಿಗೆ ತರಲಾದ ಅಮೃತ್ ಔಷಧಾಲಯ ಯೋಜನೆ ಹತ್ತು ವರ್ಷಗಳನ್ನು ಪೂರೈಸಿದೆ. ದೆಹಲಿಯಲ್ಲಿ 10 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಅಮೃತ್ ಕಾ ದಸ್ವಂ ವರ್ಷ ಕಾರ್ಯಕ್ರಮವನ್ನು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಉದ್ಘಾಟಿಸಿದರು. 


ದೇಶದಲ್ಲಿ ಇಲ್ಲಿಯವರೆಗೆ 6.85 ಕೋಟಿ ಜನರು ಪ್ರಯೋಜನ ಪಡೆದಿದ್ದಾರೆ ಮತ್ತು ಈಗಾಗಲೇ 17047 ಕೋಟಿ ರೂ. ಮೌಲ್ಯದ ಔಷಧಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಚಿವರು ಗಮನಸೆಳೆದರು.

ದೇಶದಲ್ಲಿರುವ ಅಮೃತ್ ಔಷಧಾಲಯಗಳ ಸಂಖ್ಯೆಯನ್ನು 500 ಕ್ಕೆ ಹೆಚ್ಚಿಸಲಾಗುವುದು ಮತ್ತು ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಅಮೃತ್ ಔಷಧಾಲಯಗಳನ್ನು ಪ್ರಾರಂಭಿಸಬೇಕು ಎಂದು ಜೆ.ಪಿ. ನಡ್ಡಾ ಹೇಳಿದರು.

10 ನೇ ವಾರ್ಷಿಕೋತ್ಸವದ ನೆನಪಿಗಾಗಿ ಹತ್ತು ಹೊಸ ಅಮೃತ್ ಔಷಧಾಲಯಗಳನ್ನು ತೆರೆಯಲಾಯಿತು. 10 ವರ್ಷಗಳ ಸೇವೆಯ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮತ್ತು ಅಮೃತ್ ಜಾಲವನ್ನು ಬಲಪಡಿಸಲು ಅಮೃತ್ ಇಕೋ ಗ್ರೀನ್ ಆವೃತ್ತಿ 2.0 ಡಿಜಿಟಲ್ ವೇದಿಕೆಯ ಉದ್ಘಾಟನೆಯನ್ನು ಸಹ ಉದ್ಘಾಟಿಸಲಾಯಿತು.

ಎಚ್.ಎಲ್.ಎಲ್. ಲೈಫ್‍ಕೇರ್ ಲಿಮಿಟೆಡ್‍ನ ಅಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಡಾ. ಅನಿತಾ ತಂಬಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಮೃತ್ ಯೋಜನೆಯ ಅನುಷ್ಠಾನ ಸಂಸ್ಥೆಯಾದ ಎಚ್.ಎಲ್.ಎಲ್. ಲೈಫ್‍ಕೇರ್ ಲಿಮಿಟೆಡ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಮಿನಿ ರತ್ನ ಸಾರ್ವಜನಿಕ ವಲಯದ ಉದ್ಯಮವಾಗಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries