HEALTH TIPS

ಉದ್ಯೋಗಕ್ಕಾಗಿ ಭೂಮಿ ಹಗರಣ: ವಿಚಾರಣೆ ಡಿ.4ಕ್ಕೆ ಮುಂದೂಡಿಕೆ

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಅವರ ಕುಟುಂಬ ಸದಸ್ಯರು ಮತ್ತು ಇತರರಿಗೆ ಸಂಬಂಧಿಸಿದ 'ಉದ್ಯೋಗಕ್ಕಾಗಿ ಭೂಮಿ ಹಗರಣ'ದಲ್ಲಿ ದೋಷಾರೋಪ ನಿಗದಿಯನ್ನು ದೆಹಲಿ ನ್ಯಾಯಾಲಯ ಡಿಸೆಂಬರ್‌ 4ಕ್ಕೆ ಸೋಮವಾರ ಮುಂದೂಡಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್, ಅವರ ಪತ್ನಿ- ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.

ಲಾಲೂ ಅವರು ರೈಲ್ವೆ ಸಚಿವರಾಗಿದ್ದ 2004ರಿಂದ 2009ರ ವರೆಗಿನ ಸಮಯದಲ್ಲಿ ಮಧ್ಯಪ್ರದೇಶದ ಜಬಲ್ಪುರದಲ್ಲಿ ರೈಲ್ವೆ ಇಲಾಖೆಯ ಪ‍ಶ್ಚಿಮ ಮಧ್ಯ ವಲಯದ ಗ್ರೂಪ್-ಡಿ ವರ್ಗದ ನೇಮಕಾತಿಗಳನ್ನು ಮಾಡಲಾಗಿತ್ತು. ಈ ವೇಳೆ ನೇಮಕ ಆದವರು ಲಾಲೂ ಅವರ ಕುಟುಂಬದವರಿಗೆ ಮತ್ತು ಸಹಚರರಿಗೆ ಜಮೀನನ್ನು ಉಡುಗೊರೆಯಾಗಿ ನೀ‌ಡಿದ್ದರು ಎಂದು ಸಿಬಿಐ ಆರೋಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries