HEALTH TIPS

ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

ವಿಶಾಖಪಟ್ಟಣ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. 

ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ ಸೇರಿ ಆರು ಮಂದಿಯನ್ನು ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಇದೇ ವರ್ಷ ಮೇ 7ರಂದು ವೈ. ರಾಮಾವರಂ ಮಂಡಲ ಅರಣ್ಯ ಪ್ರದೇಶದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries