HEALTH TIPS

ಜಲಸಂರಕ್ಷಣೆ ಸೇರಿ 9 ಸಂಕಲ್ಪ ತೊಡಲು ಪ್ರತಿ ಭಾರತೀಯರಿಗೆ ಪ್ರಧಾನಿ ಕರೆ

ಉಡುಪಿ: ಜಲ ಸಂರಕ್ಷಣೆ, ನದಿಗಳ ಉಳಿಸುವಿಕೆ ಸೇರಿದಂತೆ ಪ್ರತಿಯೊಬ್ಬ ಭಾರತೀಯರು 9 ಸಂಕಲ್ಪಗಳನ್ನು ತೊಡುವಂತೆ ಪ್ರಧಾನಿ ನರೇಂದ್ರ ಮೋದಿ ಆವರು ದೇಶದ ಜನತೆಗೆ ಕರೆ ನೀಡಿದ್ದಾರೆ.

ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ-ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಮಠದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಲ್ಲಿ ಒಂದು ಮರ ನೆಡುವಂತೆ, ತಲಾ ಒಬ್ಬನಾದರೂ ಬಡವನಿಗೆ ಸಹಾಯ ಮಾಡುವಂತೆ, ಸ್ವದೇಶಿ, ಆತ್ಮನಿರ್ಭರ ಭಾರತಕ್ಕೆ ಬೆಂಬಲ, ಸಾವಯವ ಕೃಷಿಗೆ ಒತ್ತು, ಆರೋಗ್ಯಪೂರ್ಣ ಬದುಕು, ಯೋಗಾಭ್ಯಾಸ, ಹಸ್ತಪ್ರತಿಗಳ ಸಂರಕ್ಷಣೆಯ ಸಂಕಲ್ಪ ತೊಡುವಂತೆ ಅವರು ಹೇಳಿದರು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮುಖಂಡ ರಾದ ಬಿ. ವೈ. ವಿಜಯೇಂದ್ರ, ರಾಜ್ಯ ಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶಾಸಕರಾದ ವಿ ಸುನಿಲ್ ಕುಮಾರ್, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries