HEALTH TIPS

ರಾಮ ಮಂದಿರ ಧ್ವಜಾರೋಹಣ: ಬುಡಕಟ್ಟು ಜನರು, ಅರಣ್ಯವಾಸಿಗಳು ಮುಖ್ಯ ಅತಿಥಿಗಳು

ಅಯೋಧ್ಯೆ: ಮಂಗಳವಾರ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ‌ಸೋನ್‌ಭದ್ರದ ಬುಡಕಟ್ಟು ಮತ್ತು ಅರಣ್ಯವಾಸಿ ಸಮುದಾಯಗಳ ಪ್ರತಿನಿಧಿಗಳು, ಬಾಬರಿ ಪ್ರಕರಣದ ದಾವೆದಾರನ ಮಗ ಸೇರಿದಂತೆ ಹಲವು ಮಂದಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡರು.

ಶ್ರೀ ರಾಮ ಮಂದಿರ ಟ್ರಸ್ಟ್‌ನಿಂದ ಆಹ್ವಾನಿಸಲ್ಪಟ್ಟವರಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಭವ್ಯ ಸ್ವಾಗತ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮ ಮಂದಿರ ಟ್ರಸ್ಟ್ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ಅತಿಥಿಗಳ ವಸತಿಗೆ ವ್ಯವಸ್ಥೆ ಮಾಡಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಿವೆ ಎಂದು ಅವರು ಹೇಳಿದ್ದಾರೆ.

ಆತಿಥ್ಯಕ್ಕಾಗಿ ಅತಿಥಿಗಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಅಯೋಧ್ಯೆ ಮೇಯರ್ ಗಿರೀಶ್ ಪಾಟಿ ತ್ರಿಪಾಠಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries