ಬದಿಯಡ್ಕ: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನವು ಸಂಘಟಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಪ್ರಧಾನ ಕಾರ್ಯದರ್ಶಿ, ಸಾಹಿತ್ಯ ಪ್ರೇಮಿ ಅಖಿಲೇಶ್ ನಗುಮುಗಂ, ಹಾಗೂ ಧಾರ್ಮಿಕ ಸಾಂಸ್ಕೃತಿಕ ಸಾಮಾಜಿಕ ಮುಂದಾಳು, ವಾಗ್ಮಿ, ವಾಂತಿಚ್ಚಾಲ್ ಮಂತ್ರಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನ ಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್ ಅವರಿಗೆ ಕಲ್ಕೂರ ರಾಜ್ಯೋತ್ಸವ ಪುರಸ್ಕಾರ ಪ್ರದಾನ ಮಾಡಲಾಯಿತು. ಮಂಗಳೂರು ಡಾನ್ ಬಾಸ್ಕೋ ಹಾಲಿನಲ್ಲಿ ನಡೆದ ಸಮಾರಂಭದಲ್ಲಿ ಚಿತ್ರಾಪುರ ಮಠದ ಶ್ರೀ ವಿಜ್ಯೇಂದ್ಯ ತೀರ್ಥ ಶ್ರೀಪಾದರು ಉದ್ಘಾಟಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಖಿಲ ಭಾರತ್ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ ಭಂಡಾರಿ, ಶಾಸಕ ವೇದವ್ಯಾಸ ಕಾಮತ್, ಎಂ ಬಿ ಪುರಾಣಿಕ್, ಕ.ಸಾ.ಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸುರೇಶ್ ಶೆಟ್ಟಿ ಯಯ್ಯಾಡಿ, ಪ್ರದೀಪ್ ಕುಮಾರ್ ಕಲ್ಕೂರ ಮುಂತಾದವರು ಉಪಸ್ಥಿತರಿದ್ದರು.




.jpg)
