HEALTH TIPS

ಎಲ್ಗಾರ್ ಪರಿಷದ್ ಪ್ರಕರಣ: ಹೋರಾಟಗಾರ್ತಿ ಜ್ಯೋತಿ ಜಗತಾಪ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ತನ್ನ ಕಕ್ಷಿದಾರರು ಐದು ವರ್ಷಗಳಿಂದಲೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಎಂದು ಜಗತಾಪ್ ಪರ ಹಿರಿಯ ನ್ಯಾಯವಾದಿ ಅಪರ್ಣಾ ಭಟ್ ತಿಳಿಸಿದ ಬಳಿಕ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ ಮತ್ತು ಸತೀಶಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಜಾಮೀನು ಆದೇಶವನ್ನು ಹೊರಡಿಸಿತು.

ಈ ಹಿಂದೆ ಮುಂಬೈ ಉಚ್ಚ ನ್ಯಾಯಾಲಯವು,ಜಗತಾಪ್ 2017, ಜ.31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರದರ್ಶನದ ಸಮಯ ಆಕ್ರಮಣಕಾರಿ ಮತ್ತು ಅತ್ಯಂತ ಪ್ರಚೋದನಾಕಾರಿ ಎಂದು ಹೇಳಲಾದ ಘೋಷಣೆಗಳನ್ನು ಕೂಗಿದ್ದ ಕಬೀರ್ ಕಲಾ ಮಂಚ್ ನ (ಕೆಕೆಎಂ)ಸಕ್ರಿಯ ಸದಸ್ಯೆಯಾಗಿದ್ದಾರೆ ಎಂದು ಎತ್ತಿ ಹಿಡಿದಿತ್ತು.

ಕೆಕೆಎಂ ಸಿಪಿಐ (ಮಾವೋವಾದಿ) ನಿಯಂತ್ರಣದಲ್ಲಿರುವ ಸಂಘಟನೆಯಾಗಿದೆ ಎಂದು ಎನ್‌ಐಎ ಪ್ರತಿಪಾದಿಸಿದೆ.

ತನಗೆ ಜಾಮೀನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಫೆಬ್ರವರಿ 2022ರ ಆದೇಶವನ್ನು ಪ್ರಶ್ನಿಸಿ ಜಗತಾಪ್ ಸಲ್ಲಿಸಿದ್ದ ಮೇಲ್ಮನವಿಯನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿತ್ತು.

ಜಗತಾಪ್ ಅವರನ್ನು ಸೆಪ್ಟಂಬರ್ 2020ರಲ್ಲಿ ಬಂಧಿಸಲಾಗಿತ್ತು.

ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ಮಾಡಲಾಗಿದ್ದ ಪ್ರಚೋದನಾಕಾರಿ ಭಾಷಣಗಳು 2018,ಜ.1ರಂದು ಪುಣೆ ಹೊರವಲಯದ ಭೀಮಾ-ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರ ಭುಗಿಲೇಳಲು ಕಾರಣವಾಗಿದ್ದವು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries