ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸ್ಥಾಪಕರ ದಿನಾಚರಣೆಯು ನಡೆಯಿತು. ಪ್ರಥಮವಾಗಿ ಶ್ರೀ ಅನ್ನಪೂರ್ಣೇಶ್ವರೀ ಸಂಸ್ಕøತ ಶಾಲೆಯು ಆರಂಭಗೊಂಡಿದ್ದ ಸಂದರ್ಭದಲ್ಲಿ ಶಾಲೆಯ ಸ್ಥಾಪಕರಾಗಿದ್ದ ದಿ. ಬಳ್ಳಪದವು ವಾಸುದೇವ ಉಪಾಧ್ಯಾಯರ ಸಂಸ್ಮರಣೆ ನಡೆಯಿತು.
ಶಾಲಾ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಡಾ. ಎ.ಪಿ. ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲೆಯ ನಿವೃತ್ತ ಅಧ್ಯಾಪಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲೆಯ 102 ವರುಷಗಳ ಇತಿಹಾಸ ಹಾಗೂ ಹಂತ ಹಂತವಾಗಿ ಅಭಿವೃದ್ಧಿ ಹೊಂದಿ ಉನ್ನತ ಹಾಗೂ ಮೌಲ್ಯಯುತ ಶಿಕ್ಷಣ ಸಂಸ್ಥೆಯಾಗಿ ಬೆಳೆದ ವಿಚಾರಗಳು ಎಲ್ಲರನ್ನೂ ಪುಳಕಿತಗೊಳಿಸಿತು. ಶಾಲಾ ವ್ಯವಸ್ಥಾಪಕ ನಾರಾಯಣ ಶರ್ಮ ಬಳ್ಳಪದವು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವ್ಯವಸ್ಥಾಪಕ ಮಂಡಳಿಯ ಸಹಕಾರ್ಯದರ್ಶಿ ಮಧುಸೂದನ್ ತೈರೆ ವಂದಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರು, ಮಾತೃ ಸಮಿತಿ ಅಧ್ಯಕ್ಷೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕಾರೀ ಸಮಿತಿಗಳ ಸದಸ್ಯರು, ಶಾಲಾ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧ್ಯಾಪಕ-ಅಧ್ಯಾಪಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




.jpg)
