HEALTH TIPS

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ-ಜಂಟಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ

ಕಾಸರಗೋಡು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜಂಟಿ ಕಾರ್ಮಿಕ ಸಂಘಟನೆ ವತಿಯಿಂದ ಕಾಸರಗೋಡು ಬಿಎಸ್ಸೆನ್ನೆಲ್ ಕಚೇರಿ ಪ್ರತಿಭಟನಾ ಧರಣಿ ನಡೆಸಲಾಯಿತು. ಕಾರ್ಮಿಕ ವಿರೋಧಿ ಕಾರ್ಮಿಕ ಕಾಯ್ದೆ ರದ್ದುಗೊಳಿಸಬೇಕು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಖು ಮುಂತಾದ ಬೇಡಿಕೆ ಮುಂದಿರಿಸಿ ಜಂಟಿ ಕಾರ್ಮಿಕ  ಒಕ್ಕೂಟ ವತಿಯಿಂದ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು. 

ಕಾಸರಗೋಡಿನ ಬಿಎಸ್‍ಎನ್‍ಎಲ್ ಕಚೇರಿ ಎದುರು ನಡೆದ ಧರಣಿಯನ್ನು ಸಿಐಟಿಯು ರಾಜ್ಯ ಸಮಿತಿ ಕಾರ್ಯದರ್ಶಿ ಟಿ.ಕೆ.ರಾಜನ್ ಉದ್ಘಾಟಿಸಿದರು.  ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಟಿ. ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪಿ.ವಿ. ತಂಬಾನ್, ಕೆ.ಭಾನುಪ್ರಕಾಶ್, ಟಿ.ಪ್ರಕಾಶನ್, ವಿ.ವಿ. ಪ್ರಸನ್ನ ಕುಮಾರಿ, ಬಿಜು ಉನ್ಣಿತ್ತಾನ್ ಮತ್ತು ಶಿಜು ಕಣ್ಣನ್ ಉಪಸ್ಥಿತರಿದ್ದರು. ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ. ಮಣಿಮೋಹನನ್ ಸ್ವಾಗತಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries