HEALTH TIPS

ಗುರುನಾನಕ್‌ ಜಯಂತಿ: ಪಾಕ್‌ಗೆ ಭೇಟಿ ನೀಡಿದ ಭಾರತೀಯರು

ಲಾಹೋರ್‌: ಗುರುನಾನಕ್‌ ದೇವ್‌ ಅವರ 556ನೇ ಜಯಂತಿಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ 2,100 ಮಂದಿ ಭಾರತೀಯ ಸಿಖ್ಖರು ಮಂಗಳವಾರ ವಾಘಾ ಗಡಿಯ ಮಾರ್ಗವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. 

ಪಾಕಿಸ್ತಾನ ಸಿಖ್‌ ಗುರುದ್ವಾರ ಪರಬಂಧಕ್‌ ಸಮಿತಿಯ ಅಧ್ಯಕ್ಷ ಹಾಗೂ ಪಂಜಾಬ್‌ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಸರ್ದಾರ್‌ ರಮೇಶ್‌ ಸಿಂಗ್‌ ಅರೋರಾ, ಎವಾಕ್ಯೂ ಟ್ರಸ್ಟ್‌ ಪ್ರಾಪರ್ಟಿ ಬೋರ್ಡ್‌ (ಇಟಿಪಿಬಿ) ಮುಖ್ಯಸ್ಥ ಸಾಜಿದ್‌ ಮೊಹಮ್ಮದ್‌ ಚೌಹಾಣ್‌, ಹೆಚ್ಚುವರಿ ಕಾರ್ಯದರ್ಶಿ ನಾಸಿಕ್‌ ಮುಷ್ತಾಕ್‌ ಅವರು ಭಾರತೀಯ ಸಿಖ್ಖರನ್ನು ವಾಘಾ ಗಡಿಯಲ್ಲಿ ಸ್ವಾಗತಿಸಿದ್ದಾರೆ.

ಭಾರತೀಯ ಸಿಖ್ಖರ ಪೈಕಿ ಅಕಾಲ್‌ ತಖ್ತ್‌ ನಾಯಕ ಜಾನಿ ಕುಲದೀಪ್‌ ಸಿಂಗ್‌ ಗರ್ಗಾಜ್‌, ಬೀಬಿ ಗುರೀಂದರ್‌ ಕೌರ್‌ ನೇತೃತ್ವದ ಶಿರೋಮಣಿ ಗುರುದ್ವಾರ ಪರಬಂಧಕ್‌ ಸಮಿತಿ ನಿಯೋಗ ಹಾಗೂ ದೆಹಲಿ ಗುರುದ್ವಾರ ನಿರ್ವಹಣಾ ಸಮಿತಿಯ ರವೀಂದರ್‌ ಸಿಂಗ್‌ ಸ್ವೀಟಾ ಅವರೂ ಇದ್ದಾರೆ ಎಂದು ಇಟಿಪಿಬಿ ವಕ್ತಾರ ಗುಲಾಮ್‌ ಮೊಹಿಯುದ್ದೀನ್‌ ಹೇಳಿದ್ದಾರೆ.

ಅಲ್ಲದೇ, ಪಾಕಿಸ್ತಾನ ಸರ್ಕಾರವು ಗುರುನಾನಕ್‌ ಜಯಂತಿಯಲ್ಲಿ ಪಾಲ್ಗೊಳ್ಳಲು 2,150 ಮಂದಿ ಭಾರತೀಯ ಸಿಖ್ಖರಿಗೆ ವೀಸಾ ಒದಗಿಸಿತ್ತು. ಅದರಂತೆ ಎಲ್ಲಾ ಪ್ರಕ್ರಿಯೆಗಳ ನಂತರ ಸಿಖ್ಖರು ಪಾಕಿಸ್ತಾನ ಪ್ರವೇಶಿಸಿದ್ದಾರೆ. ನವೆಂಬರ್‌ 13ರಂದು ಅವರು ಹಿಂದಿರುಗಲಿದ್ದಾರೆ ಎಂದೂ ಗುಲಾಮ್‌ ಮಾಹಿತಿ ನೀಡಿದ್ದಾರೆ.

ಮೇ ತಿಂಗಳಲ್ಲಿ ಭಾರತ- ಪಾಕಿಸ್ತಾನ ಸಂಘರ್ಷ ನಡೆದ ಬಳಿಕ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ‌ಪ್ರೆಜೆಗಳು ನೇರವಾಗಿ ಸಂಪರ್ಕಿಸುವ ಅವಕಾಶ ಈ ಮೂಲಕ ಸಿಕ್ಕಂತಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries