HEALTH TIPS

'ದಿತ್ವಾ' ಚಂಡಮಾರುತಕ್ಕೆ ದ್ವೀಪ ರಾಷ್ಟ್ರ ತತ್ತರ: ಸಹಾಯ ಹಸ್ತ ಚಾಚಿದ ಭಾರತ

 ನವದೆಹಲಿ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 'ದಿತ್ವಾ' ಚಂಡಮಾರುತದ ಪರಿಣಾಮದಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದ್ದು, ಭಾರತೀಯ ಸೇನೆ ಸಹಾಯ ಹಸ್ತ ಚಾಚಿದೆ.

ಭಾರತೀಯ ವಾಯು‍ಪಡೆಯು 'ಆಪರೇಷನ್‌ ಸಾಗರ್‌ ಬಂಧು' ಕಾರ್ಯಾಚರಣೆಯ ಮೂಲಕ ಶ್ರೀಲಂಕಾದಲ್ಲಿ ನೆಲೆಸಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗಿದೆ.

ತಿರುವನಂತಪುರ ಮತ್ತು ಹಿಂಡನ್‌ನಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಭಾರತೀಯ ವಾಯುಪಡೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.


ವಿಪತ್ತು ಪರಿಹಾರ ನಿರ್ವಹಣೆಗಾಗಿ ಭಾರತೀಯ ವಾಯುಪಡೆಯ Mi-17 V5 ಹೆಲಿಕಾಪ್ಟರ್‌ಗಳು ಕೊಲಂಬೊದಲ್ಲಿ ಇರಿಸಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ವೈದ್ಯಕೀಯ ಮತ್ತು ಅಗತ್ಯ ಸಾಮಗ್ರಿಗಳನ್ನು ಸರಬರಾಜುಗಳು ಮಾಡಲಾಗುತ್ತಿದೆ. ಜೀವಗಳನ್ನು ರಕ್ಷಿಸುವಲ್ಲಿ ಹಾಗೂ ಸಕಾಲದಲ್ಲಿ ನೆರೆಹೊರೆಯ ರಾಷ್ಟ್ರಗಳಿಗೆ ಭಾರತೀಯ ವಾಯು‍ಪಡೆ ಸದಾ ಬೆಂಬಲ ಸೂಚಿಸುತ್ತದೆ ಎಂದು ಎಕ್ಸ್‌ನಲ್ಲಿ ತಿಳಿಸಿದೆ.

ಶ್ರೀಲಂಕಾದಲ್ಲಿ 'ದಿತ್ವಾ' ಚಂಡಮಾರುತದ ಪರಿಣಾಮ ಜೋರಾಗಿದ್ದು, ಪ್ರವಾಹಕ್ಕೆ ಸಿಲುಕಿ ಇದುವರೆಗೆ 159 ಮಂದಿ ಮೃತಪಟ್ಟಿದ್ದಾರೆ. ಕೆಲನಿ ನದಿಯಲ್ಲಿ ನೀರಿನ ಮಟ್ಟ ಏರುತ್ತಲೇ ಇದೆ. ಹೀಗಾಗಿ, ರಾಜಧಾನಿ ಕೊಲಂಬೊದ ವಿವಿಧೆಡೆ ಪರಿಸ್ಥಿತಿ ತೀವ್ರಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ತಿಳಿಸಿದೆ.

ಒಂದು ವಾರ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಸೃಷ್ಟಿಸಿರುವ ಅವಾಂತರದಿಂದಾಗಿ ಇದುವರೆಗೆ ನಾಪತ್ತೆಯಾದವರ ಸಂಖ್ಯೆ 203ಕ್ಕೆ ಏರಿದೆ ಎಂದೂ ಮಾಹಿತಿ ನೀಡಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries