HEALTH TIPS

ಹಸೀನಾ ಹಸ್ತಾಂತರ: ಭಾರತದ ಪ್ರತಿಕ್ರಿಯೆ ಬಯಸಿದ ಬಾಂಗ್ಲಾ

ಢಾಕಾ: 'ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರ ಹಸ್ತಾಂತರ ಕುರಿತು ಈ ಹಿಂದೆ ಮಾಡಿದ್ದ ಮನವಿಗೆ ಭಾರತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ನ್ಯಾಯಿಕ ಪ್ರಕ್ರಿಯೆ ಮುಗಿದು, ಮಾಜಿ ಪ್ರಧಾನಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗಾಗಿ ಭಾರತದಿಂದ ನಾವು ಪ್ರತಿಕ್ರಿಯೆ ಬಯಸುತ್ತೇವೆ' ಎಂದು ಬಾಂಗ್ಲಾ ದೇಶದ ಸರ್ಕಾರ ಬುಧವಾರ ಹೇಳಿದೆ.

ಮಾನವೀಯತೆ ಮೇಲಿನ ದಾಳಿ' ಕುರಿತ ಆರೋಪವು ಸಾಬೀತಾದ ನಂತರ ಅಂತರರಾಷ್ಟ್ರೀಯ ವಿಶೇಷ ನ್ಯಾಯಮಂಡಳಿ 78 ವರ್ಷದ ಹಸೀನಾ ಅವರಿಗೆ ನವೆಂಬರ್‌ 17ರಂದು ಮರಣ ದಂಡನೆ ವಿಧಿಸಿತ್ತು. ಇದಾದ ನಂತರ ಕಳೆದ ವಾರ ಮುಹಮ್ಮದ್ ಯೂನಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ಭಾರತ ಸರ್ಕಾರಕ್ಕೆ ಅಧಿಕೃತ ಪತ್ರವೊಂದನ್ನು ರವಾನಿಸಿದೆ. ಇತ್ತೀಚಿನ ಮನವಿಗೆ ನಾವು ಭಾರತದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇವೆ' ಎಂದು ಬಾಂಗ್ಲಾ ವಿದೇಶಾಂಗ ಇಲಾಖೆ ಸಲಹೆಗಾರ ಎಂ. ತೌಹಿದ್ ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

'ಅವರು (ಭಾರತ ಸರ್ಕಾರ) ಒಂದು ವಾರದಲ್ಲಿ ಉತ್ತರ ನೀಡಬಹುದು ಎಂದೇನೂ ನಾನು ನಿರೀಕ್ಷಿಸುವುದಿಲ್ಲ. ಆದರೆ, ಉತ್ತರ ಸಿಗಬೇಕೆಂದು ಬಯಸುತ್ತೇವೆ. ಎರಡೂ ದೇಶಗಳ ನಡುವಿನ ಹಸ್ತಾಂತರ ಒಪ್ಪಂದದ ಅನ್ವಯ ಹಸೀನಾ ಅವರನ್ನು ವಶಕ್ಕೆ ಒಪ್ಪಿಸಬೇಕೆಂದು ನವದೆಹಲಿಯಲ್ಲಿರುವ ಬಾಂಗ್ಲಾ ಹೈಕಮಿಷನ್ ಭಾರತಕ್ಕೆ ಅಧಿಕೃತ ಮನವಿ ಸಲ್ಲಿಸಿತ್ತು' ಎಂದರು.

ಭಾರಿ ಪ್ರತಿಭಟನೆ, ಹಿಂಸಾಚಾರದ ನಂತರ ಪದಚ್ಯುತಿಗೊಂಡಿದ್ದ ಶೇಖ್‌ ಹಸೀನಾ ಅವರು 2024ರ ಆಗಸ್ಟ್‌ನಿಂದ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

'ಪರಾರಿಯಾದ ಅಪರಾಧಿಗಳ' ಹಸ್ತಾಂತರಕ್ಕಾಗಿ ಹೇಗ್‌ನಲ್ಲಿರುವ ಅಂತರರಾಷ್ಟ್ರೀಯ ಅಪರಾಧಿಕ ನ್ಯಾಯಾಲಯದ (ಐಸಿಸಿ) ಮೊರೆಹೋಗಲು ಚಿಂತನೆ ನಡೆಸುತ್ತಿರುವುದಾಗಿ ಮಧ್ಯಂತರ ಸರ್ಕಾರದ ಕಾನೂನು ಸಲಹೆಗಾರ ಆಸಿಫ್‌ ನಸ್ರುಲ್‌ ನವೆಂಬರ್‌ 20ರಂದು ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries