ಮಂಜೇಶ್ವರ : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆದ ಕರಾಟೆ ಟೈಕುಂಡೋ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು ತಮ್ಮ ಉತ್ತಮ ಪ್ರದರ್ಶನದ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳಿಗೆ ತೀವ್ರ ಪೈಪೆÇೀಟಿ ನೀಡಿದ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯ ತಂಡ ದ್ವಿತೀಯ ರನ್ನರ್ ಅಪ್ ಸ್ಥಾನ ಗಳಿಸುವ ಮೂಲಕ ತಮ್ಮ ಸಾಮಥ್ರ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡ ಪೀಸ್ ಕ್ರಿಯೇಟಿವ್ ಶಾಲೆಯ ಏಳು ವಿದ್ಯಾರ್ಥಿಗಳು ಚಿನ್ನದ ಪದಕ ಗಳಿಸುವ ಅಪೂರ್ವ ಸಾಧನೆ ಮಾಡಿದ್ದಾರೆ. ಖದೀಜ ರಿಹಾ, ಫಾತಿಮಾ, ಆಯಿಷಾ ಫಿಲ್ಝ, ಶಿಜಾ ಸಹರಾ, ಖದೀಜ ಅಮ್ನಾ, ಝಹಾ ಅಶ್ರಫ್, ಆಯಿಷಾಬಿ ಎಂಬವರು ಚಿನ್ನದ ಪದಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮುಖ್ಯ ಅತಿಥಿಯಾಗಿ ಹಾಜರಾಗಿ ವಿಜೇತರನ್ನು ಅಭಿನಂದಿಸಿದರು.
ಶಾಲೆಯ ದೈಹಿಕ ಶಿಕ್ಷಕರು ಮತ್ತು ತರಬೇತುದಾರರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸದ ಫಲವಾಗಿ ಈ ಯಶಸ್ಸು ದಾಖಲಿಸಿದರೆಂದೂ, ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಸಾಧಿಸುವ ವಿಶ್ವಾಸ ಶಾಲಾ ನಿರ್ವಹಣಾ ಮಂಡಳಿ ವ್ಯಕ್ತಪಡಿಸಿದೆ.
ಶಾಲಾ ಪ್ರಾಂಶುಪಾಲರು, ಆಡಳಿತ ಮಂಡಳಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮ್ಮ ಪರಿಶ್ರಮದಿಂದ ಉಜ್ವಲ ಕ್ಷಣಗಳನ್ನು ಸೃಷ್ಟಿಸಿದ ವಿದ್ಯಾರ್ಥಿಗಳು ಮತ್ತು ಅವರ ತರಬೇತುದಾರರಿಗೆ ಎಲ್ಲ ವಲಯಗಳಿಂದಲೂ ಅಭಿನಂದನೆಗಳು ಹರಿದು ಬರುತ್ತಿವೆ.




.jpg)
