HEALTH TIPS

ಲೈಂಗಿಕ ದೌರ್ಜನ್ಯ: ಸ್ವಾಮಿ ಚೈತನ್ಯಾನಂದ ಪ್ರಕರಣದಲ್ಲಿ ಮೂವರಿಗೆ ಜಾಮೀನು

 ನವದೆಹಲಿ: ದೆಹಲಿಯ ಖಾಸಗಿ ಮ್ಯಾನೇಜ್‌ಮೆಂಟ್‌ ಸಂಸ್ಥೆಯೊಂದರ ಕಾಲೇಜಿನ 16 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ದೆಹಲಿಯ ನ್ಯಾಯಾಲಯವೊಂದು ಶನಿವಾರ ಜಾಮೀನು ಮಂಜೂರು ಮಾಡಿದೆ.

ಸ್ವಾಮಿ ಚೈತನ್ಯಾನಂದ ಅವರು ಖಾಸಗಿ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಕಾಜಲ್‌, ಭಾವನಾ ಮತ್ತು ಶ್ವೇತಾ ಅವರಿಗೆ ಕೋರ್ಟ್‌ ಜಾಮೀನು ನೀಡಿದೆ. ದೋಷಾರೋಪ ಪಟ್ಟಿಯಲ್ಲಿ ಈ ಮೂವರು ಆರೋಪಿಗಳ ಹೆಸರಿತ್ತು. ಆದರೆ, ಇವರನ್ನು ಬಂಧಿಸಿರಲಿಲ್ಲ. ಪ್ರತಿಯೊಬ್ಬರೂ ₹20 ಸಾವಿರ ಮೌಲ್ಯದ ಬಾಂಡ್‌ ನೀಡುವಂತೆ ನ್ಯಾಯಾಲಯ ಸೂಚಿಸಿತು. ಪ್ರಕರಣದ ವಿಚಾರಣೆಯನ್ನು ಡಿ.2ಕ್ಕೆ ಮುಂದೂಡಿತು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries