ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಸಂಪನ್ನವಾಯಿತು. ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಧಾರ್ಮಿಕ ಸಾಂಸ್ಕøತಿಕ ಸಮಾರಂಭಗಳೊಂದಿಗೆ ಕಾರ್ಯಕ್ರಮಗಳು ನ. 26 ಮತ್ತು 27 ಬುಧವಾರ ಮತ್ತು ಗುರುವಾರ ಎರಡು ದಿನಗಳಲ್ಲಿ ಜರಗಿದವು. ಪ್ರಥಮ ದಿನ ಅಭಿಷೇಕ ಪೂಜೆ, ಉಷಪೂಜೆ, ಗಣಹೋಮ, ಕಲಶಪೂಜೆ, ಶ್ರೀ ದೇವರಿಗೆ ನವಕಾಭಿಷೇಕ, ಭಕ್ತರಿಂದ ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಪ್ರಸಾದ ಭೋಜನ ಜರಗಿದವು.
ರಾತ್ರಿ ಶ್ರೀ ಭೂತಬಲಿ, ರಾಜಾಂಗಣದಲ್ಲಿ ನೃತ್ಯಸೇವೆ, ಕೋಟೂರಿಗೆ ಕಟ್ಟೆ ಸವಾರಿಯಾಗಿ ಹಿಂದುರಿಗಿ ಬಂದ ಬಳಿಕ ಕಟ್ಟೆಪೂಜೆ ಜರಗಿದವು. ಉತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾ ಮಂಡಳಿ ಮಲ್ಲ ಇವರಿಂದ ಯಕ್ಷಗಾನ ಬಯಲಾಟ ಸೇವೆ ಜರಗಿತು.
ದ್ವಿತೀಯ ದಿನ ಬೆಳಗ್ಗೆ ಅಭಿಷೇಕ ಪೂಜೆ, ಉಷಪೂಜೆ, ಶಿವೇಲಿ, ರಾಜಾಂಗಣದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಧ್ಯಾಹ್ನ ಮಹಾಪೂಜೆ, ಮಂತ್ರಾಕ್ಷತೆ ಮತ್ತು ಪ್ರಸಾದ ಭೋಜನ ಜರಗಿದವು. ಮಧ್ಯಾಹ್ನ ವಿಷ್ಣುಮೂರ್ತಿ ದೈವದ ಕೋಲ ಜರಗಿ ದೈವಾರಾಧನೆ ಸಂಪನ್ನವಾಯಿತು. ಗಿರೀಶ ಅಡಿಗ ಕರಿಚೇರಿ ಅವರಿಂದ ದೇವರ ನೃತ್ಯಸೇವೆ , ದರ್ಶನಬಲಿ ಜರಗಿದವು. ರಾತ್ರಿ ಶ್ರೀರಂಗಪೂಜೆ ನೆರವೇರಿತು. ಬಳಿಕ ಡಾ. ವಾಣಿಶ್ರೀ ನೇತೃತ್ವದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಕಾಸರಗೋಡು ಇವರು ಸಾದರಪಡಿಸುವ ಸಾಹಿತ್ಯ ಗಾನ ನೃತ್ಯ ವೈಭವ ಸಂಪನ್ನವಾಯಿತು. ಗೋವಿಂದ ಬಳ್ಳಮೂಲೆ ಸ್ವಾಗತಿಸಿ, ವಂದಿಸಿದರು. ಕ್ಷೇತ್ರ ಪ್ರಬಂಧಕ ಯನ್. ಸೀತಾರಾಮ ಬಳ್ಳುಳ್ಳಾಯ ಮಹೋತ್ಸವ ಸಮಾರಂಭ ನಿರ್ವಹಣೆ ಮಾಡಿದರು.




%20(1).jpg)
.jpg)
%20(1).jpg)
