HEALTH TIPS

ಚುನಾವಣಾ ನೀತಿ ಸಂಹಿತೆ: ಹೈಕೋರ್ಟ್ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಚುನಾವಣಾ ಆಯೋಗ

ತಿರುವನಂತಪುರಂ: ಚುನಾವಣೆಗೆ ಸಂಬಂಧಿಸಿದಂತೆ ನಿರ್ಮಿಸಲಾದ ಅಕ್ರಮ ಕಚೇರಿಗಳು, ಬ್ಯಾನರ್‍ಗಳು, ಬೋರ್ಡ್‍ಗಳು, ಧ್ವಜಗಳು ಮತ್ತು ಕಂಬಗಳನ್ನು ಪತ್ತೆಹಚ್ಚಲು ಮತ್ತು ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಪಾಸಣೆಗಳನ್ನು ತೀವ್ರಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಆಯೋಗವು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 

ಹೈಕೋರ್ಟ್‍ನ ನಿರ್ದೇಶನದಂತೆ, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳಿಗೆ ಅಗತ್ಯ ಬದಲಾವಣೆಗಳನ್ನು ಮಾಡಿದೆ.

ಪರಿಷ್ಕøತ ನಿರ್ದೇಶನದಂತೆ, ಜಿಲ್ಲಾ ಚುನಾವಣಾ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಪ್ರದೇಶಗಳಲ್ಲಿ ಅಕ್ರಮ ಪ್ರಚಾರ ಸಾಮಗ್ರಿಗಳ ಬಳಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಅನುಮತಿಯಿಲ್ಲದೆ ನಿರ್ಮಿಸಲಾದ ಬ್ಯಾನರ್‍ಗಳು, ಬೋರ್ಡ್‍ಗಳು, ಧ್ವಜಗಳು ಮತ್ತು ಕಂಬಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು. ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯೋಗವು ಸ್ಪಷ್ಟಪಡಿಸಿದೆ.

ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ನಿಟ್ಟಿನಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಆಯೋಗವು ಡಿಇಒಗಳಿಗೆ ನಿರ್ದೇಶನ ನೀಡಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries