HEALTH TIPS

ಪಾಕಿಸ್ತಾನ ಸೇಡಿಗೆ ತಿರುಗೇಟು: ಗಡಿ ಬಂದ್ ನಡುವೆ ಭಾರತಕ್ಕೆ ಆಗಮಿಸಿದ ಅಪ್ಘಾನಿಸ್ತಾನದ ತಾಲಿಬಾನ್ ಸಚಿವ!

ನವದೆಹಲಿ: ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಐದು ದಿನಗಳ ಭಾರತ ಮುಗಿಸಿದ ಕೆಲವು ವಾರಗಳ ನಂತರ ಇದೀಗ ತಾಲಿಬಾನ್ ಆಡಳಿತದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ ಭಾರತಕ್ಕೆ ಭೇಟಿ ನೀಡಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ ಸಂಬಂಧ ಹೆಚ್ಚಿಸುವ ಗುರಿಯೊಂದಿಗೆ ಬುಧವಾರ ಅವರು ನವದೆಹಲಿಗೆ ಆಗಮಿಸಿದರು.

ಇತ್ತೀಚಿನ ಸಂಘರ್ಷದ ನಂತರ ಅಪ್ಘಾನಿಸ್ತಾನ ಜೊತೆಗಿನ ಪ್ರಮುಖ ಭೂ ಗಡಿಯನ್ನು ಪಾಕಿಸ್ತಾನ ಬಂದ್ ಮಾಡಿದೆ. ಇದರಿಂದ ಅಫ್ಘಾನ್ ರಫ್ತುದಾರರಿಗೆ, ವಿಶೇಷವಾಗಿ ಹಣ್ಣಿನ ವ್ಯಾಪಾರಿಗಳಿಗೆ ಭಾರೀ ನಷ್ಟವನ್ನುಂಟುಮಾಡಿದೆ.

ಪಾಕಿಸ್ತಾನದೊಂದಿಗೆ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿರುವಂತೆಯೇ ಅಪ್ಘಾನಿಸ್ತಾನ ವಾಣಿಜ್ಯ ಸಚಿವರು ಇದೀಗ ಭಾರತಕ್ಕೆ ಭೇಟಿ ನೀಡಿದ್ದಾರೆ.

"ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಸುಧಾರಿಸುವುದು ಭೇಟಿಯ ಪ್ರಮುಖ ಉದ್ದೇಶವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಬುಧವಾರ ಸಚಿವರ ನೇತೃತ್ವದ ಅಪ್ಘಾನ್ ಉನ್ನತ ಮಟ್ಟದ ನಿಯೋಗ ಭಾರತದ ವ್ಯಾಪಾರ ಪ್ರಚಾರ ಸಂಸ್ಥೆಗೆ (ITPO) ಭೇಟಿ ನೀಡಿತು. ಅಪ್ಘಾನ್ ಸ್ಥಳೀಯ ಮಳಿಗೆಗಳಿಗೆ ಭೇಟಿ ನೀಡಿದ ಅಜೀಜ ಅವರಿಗೆ ಐಟಿಪಿಒ ವ್ಯವಸ್ಥಾಪಕ ನಿರ್ದೇಶಕರು ಮೇಳದಲ್ಲಿನ ಸೌಲಭ್ಯಗಳ ಕುರಿತು ವಿವರಿಸಿದರು.

ನಂತರ ಅಜೀಜಿ ಅವರು, ಮಾರುಕಟ್ಟೆ ಪ್ರವೇಶ ಮತ್ತು ವಿಸ್ತರಣೆ ಅವಕಾಶಗಳ ಕುರಿತು ಭಾರತದಲ್ಲಿರುವ ಅಫ್ಘಾನ್ ವ್ಯಾಪಾರಿಗಳನ್ನು ಭೇಟಿಯಾದರು. ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾದ ನಡುವೆ ಮತ್ತು ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಬಲಪಡಿಸಲು ಕಾಬೂಲ್‌ ಯೋಚಿಸುತ್ತಿರುವಂತೆಯೇ ನಡುವೆ ಈ ಭೇಟಿ ಆಗಿದೆ.

ಅಫ್ಘಾನಿಸ್ತಾನಕ್ಕೆ ಭಾರತದಿಂದ ರಫ್ತಾಗುವ ಪ್ರಮುಖ ವಸ್ತುಗಳಲ್ಲಿ ಔಷಧಗಳು, ಜವಳಿ, ಯಂತ್ರೋಪಕರಣಗಳು ಮತ್ತು ಸಕ್ಕರೆ, ಚಹಾ ಮತ್ತು ಅಕ್ಕಿಯಂತಹ ಆಹಾರ ಸಾಮಗ್ರಿಗಳು ಸೇರಿವೆ. ಭಾರತಕ್ಕೆ ರಫ್ತಾಗುವ ಅಪ್ಘಾನ್ ವಸ್ತುಗಳಲ್ಲಿ ಹೆಚ್ಚಾಗಿ ಕೃಷಿ ಸರಕುಗಳು ಮತ್ತು ಖನಿಜಗಳು ಸೇರಿವೆ. ಭಾರತವು ಅಕ್ಟೋಬರ್ 2025 ರಲ್ಲಿ ಕಾಬೂಲ್‌ನಲ್ಲಿ ರಾಯಭಾರಿ ಕಚೇರಿಯನ್ನು ಮರು ಸ್ಥಾಪನೆ ಮಾಡುವ ಮೂಲಕ ರಾಯಭಾರ ಸಂಪರ್ಕವನ್ನು ಪುನರ್ ಆರಂಭಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries