HEALTH TIPS

ನೌಗಮ್‌ ಸ್ಫೋಟ ಆಕಸ್ಮಿಕ | ವಿಧ್ವಂಸಕ ಕೃತ್ಯವಲ್ಲ: ಜಮ್ಮು-ಕಾಶ್ಮೀರ DGP ಸ್ಪಷ್ಟನೆ

ಶ್ರೀನಗರ: ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕ. ಇದು ವಿಧ್ವಂಸಕ ಕೃತ್ಯವಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಶನಿವಾರ ಸ್ಪಷ್ಟಪಡಿಸಿದ್ದಾರೆ.

ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದ ತನಿಖೆಯ ವೇಳೆ ವಶಪಡಿಸಿಕೊಂಡಿದ್ದ ಸ್ಫೋಟಕಗಳನ್ನು ಹರಿಯಾಣದ ಫರೀದಾಬಾದ್‌ನಿಂದ ನೌಗಮ್ ಪೊಲೀಸ್ ಠಾಣೆಗೆ ಸಾಗಿಸಲಾಗಿತ್ತು.

ಅವುಗಳನ್ನು ಠಾಣೆಯ ಆವರಣದ ತೆರೆದ ಪ್ರದೇಶದಲ್ಲಿ ಸುರಕ್ಷಿತವಾಗಿ ಇಡಲಾಗಿತ್ತು

ನಿಗದಿತ ಕಾರ್ಯವಿಧಾನದ ಭಾಗವಾಗಿ, ವಶಪಡಿಸಿಕೊಂಡ ಸ್ಫೋಟಕಗಳ ಮಾದರಿಗಳನ್ನು ವಿಧಿವಿಜ್ಞಾನ ಮತ್ತು ರಾಸಾಯನಿಕ ಪರೀಕ್ಷೆಗೆ ಕಳುಹಿಸಬೇಕಾಗಿತ್ತು. ಅವುಗಳ ಗಾತ್ರ ಹೆಚ್ಚಿದ ಕಾರಣ, ಎಫ್‌ಎಸ್‌ಎಲ್ (ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ತಂಡವು ಕಳೆದ ಎರಡು ದಿನಗಳಿಂದ ಮಾದರಿ ಸಂಗ್ರಹ ಪ್ರಕ್ರಿಯೆಯನ್ನು ನಡೆಸುತ್ತಿದೆ. ದುರದೃಷ್ಟವಶಾತ್ ಈ ವೇಳೆ (ಮಾದರಿ ಸಂಗ್ರಹ ಪ್ರಕ್ರಿಯೆ) ನಿನ್ನೆ (ಶುಕ್ರವಾರ) ರಾತ್ರಿ 11.20ರ ಸುಮಾರಿಗೆ, ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ ಎಂದು ಪ್ರಭಾತ್ ಹೇಳಿದ್ದಾರೆ.

ಸ್ಫೋಟದಲ್ಲಿ 9 ಮಂದಿ ಮೃತಪಟ್ಟು, 32 ಜನ ಗಾಯಗೊಂಡಿದ್ದಾರೆ. ‌ರಾಜ್ಯ ತನಿಖಾ ಸಂಸ್ಥೆಯ (ಎಸ್‌ಐಎ) ಒಬ್ಬ ಸಿಬ್ಬಂದಿ, ಎಫ್‌ಎಸ್‌ಎಲ್ ತಂಡದ ಮೂವರು ಸಿಬ್ಬಂದಿ, ಇಬ್ಬರು ಛಾಯಾಗ್ರಾಹಕರು, ಮ್ಯಾಜಿಸ್ಟ್ರೇಟ್ ತಂಡದ ಭಾಗವಾಗಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಮತ್ತು ತಂಡದೊಂದಿಗೆ ಇದ್ದ ಒಬ್ಬ ದರ್ಜಿ ಮೃತಪಟ್ಟಿದ್ದಾರೆ ಎಂದು ಡಿಜಿಪಿ ತಿಳಿಸಿದ್ದಾರೆ.

ಘಟನೆಯಲ್ಲಿ 27 ಪೊಲೀಸ್ ಸಿಬ್ಬಂದಿ, ಇಬ್ಬರು ಕಂದಾಯ ಅಧಿಕಾರಿಗಳು ಮತ್ತು ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಠಾಣೆ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ. ಜತೆಗೆ ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ ಎಂದೂ ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries