HEALTH TIPS

Red Fort Blast: ಮೂವರು ವೈದ್ಯರು, ಧಾರ್ಮಿಕ ಬೋಧಕನನ್ನು ವಶಕ್ಕೆ ಪಡೆದ ಎನ್‌ಐಎ

ನವದೆಹಲಿ: ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಹಾಗೂ ಧಾರ್ಮಿಕ ಬೋಧಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾರು ಸ್ಫೋಟದ ಬೆನ್ನಲ್ಲೇ ಮುಜಮ್ಮಿಲ್ ಗನಿ, ಅದಿಲ್ ರಾಥರ್, ಶಹೀನಾ ಸಯೀದ್ ಮತ್ತು ಮೌಲ್ವಿ ಇರ್ಫಾನ್ ಅಹ್ಮದ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದರು.

ದೆಹಲಿ ಸ್ಫೋಟದಲ್ಲಿ ಅಮಾಯಕರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಲ್ಲಿ ಆರೋಪಿಗಳ ಪಾತ್ರ ಅಡಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ನವೆಂಬರ್ 11ರಂದು ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ಇದರೊಂದಿಗೆ ಪ್ರಕರಣ ದಾಖಲಿಸಲ್ಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಎನ್‌ಐಎ ಈಗಾಗಲೇ ಅಮೀರ್ ರಶೀದ್ ಅಲಿ ಮತ್ತು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂಬಾತನನ್ನು ಬಂಧಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries