HEALTH TIPS

SIR ಸಿಬ್ಬಂದಿ ಸುರಕ್ಷತೆ ಖಚಿತಪಡಿಸಿ: ಬಂಗಾಳ DGPಗೆ ಚುನಾವಣಾ ಆಯೋಗ ನಿರ್ದೇಶನ

 ಕೋಲ್ಕತ್ತ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಭಾಗಿಯಾಗಿರುವ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸುರಕ್ಷತೆ ಖಚಿತಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಿ ಎಂದು ಪಶ್ಚಿಮ ಬಂಗಾಳ ಡಿಜಿಪಿ ರಾಜೀವ್ ಕುಮಾರ್‌ಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಬಿಎಲ್‌ಒಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ವರದಿಗಳು ಬಂದ ಬೆನ್ನಲ್ಲೇ ಚುನಾವಣಾ ಆಯೋಗ ಪತ್ರ ಬರೆದಿದೆ. 


ಪಶ್ಚಿಮ ಬಂಗಾಳದ ಮತದಾನ ಸಿಬ್ಬಂದಿ ಸುರಕ್ಷತೆಯನ್ನು ಕುರಿತು ಕಳೆದ ಮೂರು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಾಣಾ ಆಯೋಗ ಕಳುಹಿಸಿರುವ ಎರಡನೇ ಪತ್ರ ಇದಾಗಿದೆ.

ಕೆಲಸದ ಅತಿಯಾದ ಒತ್ತಡ ವಿರೋಧಿಸಿ ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಮುಂದೆ ಬಿಎಲ್‌ಒಗಳು ನಡೆಸಿದ ಪ್ರತಿಭಟನೆ ವೇಳೆ 'ಗಂಭೀರ ಭದ್ರತಾ ಲೋಪ' ಉಂಟಾಗಿದೆ ಎಂದು ಕೋಲ್ಕತ್ತ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮ ಅವರಿಗೆ ಇಸಿ ಬುಧವಾರ ಪತ್ರ ಬರೆದಿತ್ತು.

ಎಸ್‌ಐಆರ್ ಅಂದರೆ ಮತದಾರರ ಪಟ್ಟಿ ಶುದ್ಧೀಕರಣ: ಅಮಿತ್‌ ಶಾ

ಬಿಎಲ್‌ಒಗಳ ಮೇಲೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ದೌರ್ಜನ್ಯ ಮಾಡುತ್ತಿದೆ. ಭಯ, ಒತ್ತಡ ಮತ್ತು ಬೆದರಿಕೆ ವಾತಾವರಣ ಇದೆ. ಹೀಗಾಗಿ ರಾಜ್ಯಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಶುಕ್ರವಾರ ಮನವಿ ಮಾಡಿದ್ದರು. ಹೀಗಾಗಿ ಮತ್ತೊಂದು ಪತ್ರವನ್ನು ಡಿಜಿಪಿಗೆ ಇಸಿ ಬರೆದಿದೆ.

'ಬೂತ್ ಮಟ್ಟದ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಗೆ ಬೆದರಿಕೆ ಇದೆ ಎನ್ನುವುದು ವಿವಿಧ ಕಡೆಯಿಂದ ಭಾರತದ ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ. ಇದು ಕರ್ತವ್ಯಗಳನ್ನು ನಿರ್ವಹಿಸುವುದರಿಂದ ಸಿಬ್ಬಂದಿಯನ್ನು ತಡೆಯಬಹುದು. ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಎಸ್‌ಐಆರ್‌ ಕೆಲಸದಲ್ಲಿ ತೊಡಗಿರುವ ಇತರರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಆಯೋಗವು ಕಾಳಜಿ ವಹಿಸುತ್ತದೆ ಮತ್ತು ಆದ್ದರಿಂದ ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಿರ್ದೇಶಿಸುತ್ತದೆ ಎಂದು ಚುನಾವಣಾ ಕಾರ್ಯದರ್ಶಿ ಸುಜೀತ್ ಕುಮಾರ್ ಮಿಶ್ರಾ ಕಳುಹಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries