HEALTH TIPS

ಅಧಿಕಾರ ಹಂಚಿಕೆ; ಕೆಲವು ವಿದ್ಯಾರ್ಥಿಗಳು ಪಾಠ ಕಲಿಯಲು ಸಿದ್ಧರಿಲ್ಲ: ಕೇಂದ್ರ ಸಚಿವ

ಇಂದೋರ್‌: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಬಣ ರಾಜಕೀಯದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ, 'ಸಾರ್ವಜನಿಕರು ಪದೇ ಪದೇ ಪಾಠ ಕಲಿಸುತ್ತಿದ್ದರೂ, ಕೆಲವು ವಿದ್ಯಾರ್ಥಿಗಳು ಕಲಿಯಲು ಸಿದ್ಧರಿಲ್ಲ' ಎಂದು ಹೇಳಿದ್ದಾರೆ.

'ಯಾವ ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿದೆಯೋ, ಆ ರಾಜ್ಯದಲ್ಲೇ ಮುಖ್ಯಮಂತ್ರಿ ಕುರ್ಚಿಗಾಗಿ ಕಾಳಗ ನಡೆಯುತ್ತಿದೆ. ಪ್ರತಿಸ್ಪರ್ಧಿ ಪಕ್ಷದ ಆಂತರಿಕ ವಿಷಯವೊಂದರ ಬಗ್ಗೆ ವಿಸ್ತೃತವಾಗಿ ಟೀಕೆ ಮಾಡಲು ನಾನು ಬಯಸುವುದಿಲ್ಲ. ಆದರೆ, ಈಗಾಗಲೇ ಜನರು ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ. ಆ ಪಕ್ಷಕ್ಕೆ ಪಾಠ ಕಲಿಸುತ್ತಲೇ ಬಂದಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ಇನ್ನೂ ಕಲಿತುಕೊಳ್ಳಲು ಸಿದ್ಧರಿಲ್ಲ' ಎಂದರು.

'ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದಾದ್ಯಂತ ಜನರು ಬಿಜೆಪಿ ಬಾವುಟವನ್ನು ಇನ್ನಷ್ಟು ಎತ್ತರಕ್ಕೆ ಎತ್ತಿ ಹಿಡಿದಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತದ ಘನತೆಯನ್ನು ಹೆಚ್ಚಿಸುವಂತೆ ಅಭಿವೃದ್ಧಿ ಕೆಲಸಗಳು ನಡೆದಿವೆ' ಎಂದರು.

'ಸಂಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲು ತಮಗೆ ಜನಾದೇಶವಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಎರಡೂವರೆ ವರ್ಷದ ನಂತರ ತಮಗೆ ಸರದಿ ಪ್ರಕಾರ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ವಾಗ್ದಾನ ಮಾಡಲಾಗಿತ್ತು ಎನ್ನುವುದು ಶಿವಕುಮಾರ್‌ ವಾದ. ಕಳೆದ ಎರಡು ತಿಂಗಳಿಂದ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ಬೆನ್ನಲ್ಲೇ, ನ.20ರಿಂದ ಸಮಸ್ಯೆ ಉಲ್ಬಣಗೊಂಡಿದೆ' ಎಂದು ಸಿಂಧ್ಯಾ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries