ತಿರುಪತಿ: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ (ಡಿ.30, 31, ಹಾಗೂ ಜ1) ಆನ್ಲೈನ್ ಟಿಕೆಟ್ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಜ.8ರವರೆಗೆ ವೈಕುಂಠ ದ್ವಾರ ತೆರೆದಿರಲಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟಿಟಿಡಿ, 'ಮೂರು ದಿನಗಳ ಕಾಲ ಮಾನ್ಯ ಆನ್ಲೈನ್ ಟಿಕೆಟ್ಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಆನ್ಲೈನ್ ಟಿಕೆಟ್ಗಳಿಲ್ಲದ ಭಕ್ತರಿಗೆ ಈ ದಿನಗಳಲ್ಲಿ ದರ್ಶನಕ್ಕೆ ಅವಕಾಶವಿರುವುದಿಲ್ಲ' ಎಂದು ತಿಳಿಸಿದೆ.

