HEALTH TIPS

ಪೌರತ್ವ ನಿರ್ಧಾರದ ಅಧಿಕಾರ ಮತದಾರರ ನೋಂದಣಾಧಿಕಾರಿಗೆ ಇಲ್ಲ: ಪ್ರಶಾಂತ ಭೂಷಣ್‌ ವಾದ

 ನವದೆಹಲಿ: 'ಮತದಾರರ ನೋಂದಣಾಧಿಕಾರಿಗಳಿಗೆ(ಇಆರ್‌ಒ) ಮತದಾರರೊಬ್ಬರ ಪೌರತ್ವ ನಿರ್ಧರಿಸುವ ಹಕ್ಕು ಇಲ್ಲ. ಹೀಗಾಗಿ, ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹಲವು ನ್ಯೂನತೆಗಳಿಂದ ಕೂಡಿದೆ' ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ಮಾಹಿತಿ ನೀಡಲಾಗಿದೆ.


ಎಸ್‌ಐಆರ್‌ ಪ್ರಶ್ನಿಸಿರುವ ಅರ್ಜಿದಾರರೊಬ್ಬರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್‌, ಈ ವಿಷಯ ತಿಳಿಸಿದ್ದಾರೆ.

'ಎಸ್‌ಐಆರ್‌ ಪಾರದರ್ಶಕವಾಗಿ ನಡೆಯುತ್ತಿಲ್ಲ. ಪೌರತ್ವ ನಿರ್ಧರಿಸುವ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿ ಸ್ಪಷ್ಟತೆಯೂ ಇಲ್ಲ' ಎಂದು ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರು ಇದ್ದ ಪೀಠಕ್ಕೆ ಅವರು ತಿಳಿಸಿದ್ದಾರೆ.

ಹಲವು ತೀರ್ಪುಗಳನ್ನು ಉಲ್ಲೇಖಿಸಿದ ಭೂಷಣ್‌,'ಪೌರತ್ವ ನಿರ್ಧರಿಸುವುದು ಇಆರ್‌ಒ ಅವರ ಕೆಲಸವಲ್ಲ. ಒಬ್ಬ ವ್ಯಕ್ತಿಯ ಪೌರತ್ವ ಕುರಿತು ಶಂಕೆ ಇದ್ದಲ್ಲಿ, ಆ ವಿಚಾರವನ್ನು ಸಂಬಂಧಿಸಿದ ಪ್ರಾಧಿಕಾರಗಳಿಗೆ ಅವರು ಶಿಫಾರಸು ಮಾಡಬೇಕಷ್ಟೆ' ಎಂದು ವಾದಿಸಿದರು.

ವಾದಗಳನ್ನು ಆಲಿಸಿದ ಪೀಠವು ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries