HEALTH TIPS

ಆರ್ಥಿಕ ಬೆಳವಣಿಗೆ | 'ಹಿಂದೂ ಬೆಳವಣಿಗೆ ದರ'ದ ಕೊಂಕು- ಪ್ರಧಾನಿ ಮೋದಿ ಟೀಕೆ

 ನವದೆಹಲಿ: ದೇಶದ ನಿಧಾನಗತಿಯ ಆರ್ಥಿಕ ಬೆಳವಣಿಗೆಯನ್ನು 'ಹಿಂದೂ ಬೆಳವಣಿಗೆ ದರ' ಎಂದು ಕರೆಯುವ ಮೂಲಕ, ಸ್ವಯಂಘೋಷಿತ ಬುದ್ಧಿಜೀವಿಗಳು ನಾಗರಿಕತೆಗೆ ಅವಮಾನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

'ಹಿಂದೂಸ್ತಾನ್‌ ಟೈಮ್ಸ್‌ ನಾಯಕತ್ವ ಶೃಂಗ'ದಲ್ಲಿ ಶನಿವಾರ ಅವರು ಮಾತನಾಡಿದರು. 


'ಮುಂದಿನ 10 ವರ್ಷಗಳಲ್ಲಿ, ಗುಲಾಮಗಿರಿ ಮನಃಸ್ಥಿತಿಯಿಂದ ದೇಶವನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು' ಎಂದು ದೇಶದ ಜನರಿಗೆ ಕರೆ ನೀಡಿದರು.

'ಜಗತ್ತು ಆರ್ಥಿಕ ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತವು ಆತ್ಮವಿಶ್ವಾಸದಿಂದಿದೆ. ಯಾವುದೇ ದೇಶವು ಆತ್ಮವಿಶ್ವಾಸವಿಲ್ಲದೇ ಮುಂದುವರಿಯಲು ಸಾಧ್ಯವಿಲ್ಲ. ಭಾರತದ ಪ್ರತಿಯೊಂದು ವಲಯವೂ ವಸಾಹತುಶಾಹಿ ಮನಃಸ್ಥಿತಿಯನ್ನು ತೊರೆದು ಹೊಸ ಸಾಧನೆಗಳನ್ನು ಮಾಡುತ್ತಿದೆ' ಎಂದು ಹೇಳಿದರು.

'ಅಭಿವೃದ್ಧಿ ಹೊಂದಿದ ಭಾರತದ ಗುರಿ ಸಾಧಿಸಲು ವಸಾಹತುಶಾಹಿ ಮನಃಸ್ಥಿತಿಯು ಪ್ರಮುಖ ಅಡಚಣೆಯಾಗಿದೆ. ಇದರಿಂದ ಮುಕ್ತವಾಗುವತ್ತ ದೇಶವು ಕೆಲಸ ಮಾಡುತ್ತಿದೆ. ದೇಶದ ನಿಧಾನಗತಿಯ ಆರ್ಥಿಕತೆಯ ಮೇಲೆ ಹಿಂದೂ ನಾಗರಿಕತೆಯು ಪರಿಣಾಮ ಬೀರಿದೆ ಎಂಬ ತಪ್ಪು ಗ್ರಹಿಕೆಯನ್ನು ತಳ್ಳಿಹಾಕಲಾಗುತ್ತಿದೆ' ಎಂದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries