HEALTH TIPS

ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ

 ತಿರುಪತಿ: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. 


ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ (ಡಿ.30, 31, ಹಾಗೂ ಜ1) ಆನ್‌ಲೈನ್ ಟಿಕೆಟ್‌ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಜ.8ರವರೆಗೆ ವೈಕುಂಠ ದ್ವಾರ ತೆರೆದಿರಲಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟಿಟಿಡಿ, 'ಮೂರು ದಿನಗಳ ಕಾಲ ಮಾನ್ಯ ಆನ್‌ಲೈನ್ ಟಿಕೆಟ್‌ಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಆನ್‌ಲೈನ್ ಟಿಕೆಟ್‌ಗಳಿಲ್ಲದ ಭಕ್ತರಿಗೆ ಈ ದಿನಗಳಲ್ಲಿ ದರ್ಶನಕ್ಕೆ ಅವಕಾಶವಿರುವುದಿಲ್ಲ' ಎಂದು ತಿಳಿಸಿದೆ.

ಸಿಎಂ ರೇವಂತ ರೆಡ್ಡಿ ಭೇಟಿ

ವೈಕುಂಠ ಏಕಾದಶಿ ಹಿನ್ನೆಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಮಂಗಳವಾರ ಮುಂಜಾನೆ ದೇಗುಲಕ್ಕೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದರು.

ದರ್ಶನದ ನಂತರ, ಪುರೋಹಿತರು ರಂಗನಾಯಕಕುಲ ಮಂಟಪದಲ್ಲಿ ಅವರಿಗೆ ರೇಷ್ಮೆ ವಸ್ತ್ರಗಳನ್ನು ನೀಡಿ ಸನ್ಮಾನಿಸಿ, ಪ್ರಸಾದ (ಪವಿತ್ರ ಆಹಾರ) ನೀಡಿದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು, ಆಂಧ್ರಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವೆ ಎಸ್. ಸವಿತಾ, ಗಣಿ ಸಚಿವ ಕೆ. ರವೀಂದ್ರ ಮತ್ತು ನಟ ಚಿರಂಜೀವಿ ಸೇರಿದಂತೆ ಹಲವರು ದರ್ಶನ ಪಡೆದಿದ್ದಾರೆ.

ವೈಕುಂಠ ದ್ವಾರ (ಬಾಗಿಲು) ಇಂದು ತೆರೆಯಲಾಗಿದ್ದು, 10 ದಿನಗಳ ನಂತರ (ಜನವರಿ 8) ಮುಚ್ಚಲಾಗುವುದು. ಈ ಶುಭ ಅವಧಿಯಲ್ಲಿ ಹೊರತುಪಡಿಸಿ, ವರ್ಷಪೂರ್ತಿ ವೈಕುಂಠ ದ್ವಾರವನ್ನು ತೆರೆಯಲಾಗುವುದಿಲ್ಲ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries