ರಾಜ್ಯ ಸರಕಾರದ ಪರ ವಕೀಲರೊಬ್ಬರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸ್ವೀಕರಿಸಿದೆ. ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.
ಈ ವಿಷಯವನ್ನು ಪ್ರಸ್ತಾಪಿಸಿದ ತಕ್ಷಣ, ಪ್ರತಿವಾದಿಗಳ ಪರ ವಕೀಲರು ಸರಕಾರವು ಸುಪ್ರೀಂ ಕೋರ್ಟ್ನ ಗಮನಕ್ಕೆ ತರಲಾಗಿದೆ ಎಂದು ಹೈಕೋರ್ಟ್ಗೆ ತಿಳಿಸಲು ಅನಗತ್ಯ ನಾಟಕ ಸೃಷ್ಟಿಸುತ್ತಿದೆ ಎಂದು ಹೇಳಿದರು.




