ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನೀರ್ಚಾಲು ಶಾಖೆಯ ಸಕ್ರಿಯ ಸದಸ್ಯ ಸಿ.ವಿ.ರಮಣ ಚೇತನಡ್ಕ ಇವರ ಹೃದಯ ಚಿಕಿತ್ಸೆ (ಅಂಜಿಯೋಪ್ಲಾಸ್ಟ್)ಗೆ ಧನಸಹಾಯದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನೂತನ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಪದ್ಮರಾಜ್ ಪಟ್ಟಾಜೆ, ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಕೊಳಾರು, ಸತ್ಯನಾರಾಯಣ ಪ್ರಸಾದ್, ಗಣೇಶ್ಪಾರಕಟ್ಟೆ, ಸೌಮ್ಯ ಪ್ರಕಾಶ್, ಪ್ರಾಂತೀಯ ಪ್ರಬಂಧಕ ಚಂದ್ರ ಯಂ, ನೀರ್ಚಾಲು ಶಾಖೆಯ ಪ್ರಬಂಧಕ ಗಣೇಶ್ ಪಿ ಮತ್ತು ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

.jpg)
