HEALTH TIPS

ಶಬರಿಮಲೆ: ಮಂಡಲ ಪೂಜೆಗೆ ಸಾಕ್ಷಿಯಾದ ಸಾವಿರಾರು ಭಕ್ತರು

ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇವಾಲಯದಲ್ಲಿ ಶನಿವಾರ ನಡೆದ ಮಂಡಲ ಪೂಜೆಗೆ ಸಾವಿರಾರು ಭಕ್ತರು ಸಾಕ್ಷಿಯಾದರು. ಈ ಮೂಲಕ 41 ದಿನಗಳಿಂದ ನಡೆದ ವಾರ್ಷಿಕ ತೀರ್ಥಯಾತ್ರೆ ಸಂಪನ್ನಗೊಂಡಿತು.

ಶುಕ್ರವಾರ ಸಂಜೆ ದೇವಾಲಯದ ಸಂಕೀರ್ಣಕ್ಕೆ ಮೆರವಣಿಗೆಯಲ್ಲಿ ತರಲಾದ ಸ್ವರ್ಣವಸ್ತ್ರವನ್ನು ಅಯ್ಯಪ್ಪ ದೇವರ ವಿಗ್ರಹಕ್ಕೆ ಅಲಂಕಾರ ಮಾಡಿ, ಮಂಡಲ ಪೂಜೆ ನೆರವೇರಿಸಲಾಯಿತು.‌ ದೇವಾಲಯದ ತಂತ್ರಿ (ಮುಖ್ಯ ಅರ್ಚಕ) ಕಂಡರಾರು ಮಹೇಶ್‌ ಮೋಹನಾರು ಅವರ ನೇತೃತ್ವದಲ್ಲಿ ಶನಿವಾರ ಬೆಳಿಗ್ಗೆ 10.10ರಿಂದ 11.30ರವರೆಗೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಹಾಗೂ ಹೊರರಾಜ್ಯಗಳಿಂದ ಬಂದಿದ್ದ ಸಾವಿರಾರು ಭಕ್ತರು ಹಾಗೂ ಮಾಲೆ ಧರಿಸಿದವರು 'ಇರುಮುಡಿ' ಹೊತ್ತು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರದಿಯಲ್ಲಿ ನಿಂತಿದ್ದರು.

ರಾತ್ರಿ 10 ಗಂಟೆಗೆ 'ಹರಿವರಾಸನಂ' ಪಠಣದ ನಂತರ ಮಂಡಲ ಪೂಜೆ ನೆರವೇರಿಸಲಾಯಿತು. ಬಳಿಕ ದೇವಾಲಯದ ಬಾಗಿಲು ಮುಚ್ಚಲಾಯಿತು. ಮಕರವಿಳಕ್ಕು ಹಬ್ಬಕ್ಕಾಗಿ ಡಿಸೆಂಬರ್‌ 30ರಂದು ಸಂಜೆ 5 ಗಂಟೆಗೆ ದೇವಾಲಯ ಮತ್ತೆ ತೆರೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries