HEALTH TIPS

'ವಂದೇ ಮಾತರಂ': ಲೋಕಸಭೆಯಲ್ಲಿ ಮೋದಿ ಮಾತು

ನವದೆಹಲಿ: 'ವಂದೇ ಮಾತರಂ' ಗೀತೆಯ 150ನೇ ವಾರ್ಷಿಕೋತ್ಸವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಲೋಕಸಭೆಯಲ್ಲಿ ಸೋಮವಾರ ಮಾತನಾಡಲಿದ್ದಾರೆ.

'ಚರ್ಚೆಯಿಂದ ಗೀತೆಯ ಕುರಿತ ಮಹತ್ವದ ಮತ್ತು ಕೆಲವು ಗೊತ್ತಿಲ್ಲದ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆಯಲ್ಲಿ 'ವಂದೇ ಮಾತರಂ' ಕುರಿತ ಚರ್ಚೆಗೆ 10 ತಾಸು ಮೀಸಲಿಡಲಾಗಿದೆ.

ಈ ವಿಚಾರದ ಕುರಿತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕರಾದ ಗೌರವ್‌ ಗೊಗೊಯ್‌ ಮತ್ತು ಪ್ರಿಯಾಂಕಾ ಗಾಂಧಿ ಮತ್ತಿತರರು ಮಾತನಾಡುವ ಸಾಧ್ಯತೆ ಇದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, 'ವಂದೇ ಮಾತರಂ' ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್‌ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು' ಎಂದು ಆರೋಪಿಸಿದ್ದರು.

ರಾಜ್ಯಸಭೆಯಲ್ಲಿ ಮಂಗಳವಾರ ಗೃಹ ಸಚಿವ ಅಮಿತ್‌ ಶಾ ಅವರು ಈ ವಿಷಯದ ಕುರಿತು ಮೊದಲಿಗೆ ಮಾತನಾಡಲಿದ್ದಾರೆ. ನಂತರ ಸಚಿವ ಜೆ.ಪಿ.ನಡ್ಡಾ ಅವರು ಮಾತನಾಡಲಿದ್ದಾರೆ.

'ವಂದೇ ಮಾತರಂ' ಗೀತೆ ಕುರಿತ ಚರ್ಚೆ ಬಳಿಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries