HEALTH TIPS

ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ಸರ್ಕಾರ ವಿಫಲ: ಪ್ರತಿಭಟನೆ

ಢಾಕಾ: 'ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ವಿಫಲವಾಗಿದೆ' ಎಂದು ಆರೋಪಿಸಿ ಇಲ್ಲಿನ ಅಲ್ಪಸಂಖ್ಯಾತ ಸಂಘಟನೆಗಳು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದವು.

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್‌ ಅವರ ಬರ್ಬರ ಹತ್ಯೆಯಾದ ಕಾರಣಕ್ಕೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸಂಘಟನೆಗಳ ಮುಖಂಡರು ಢಾಕಾದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.

'ಅವರು (ಮುಹಮ್ಮದ್‌ ಯೂನಸ್‌) ಮಾನವೀಯ ಬಾಂಗ್ಲಾದೇಶ ನಿರ್ಮಾಣ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ವಾಸ್ತವದಲ್ಲಿ ಅಮಾನವೀಯ ಮುಖ್ಯ ಸಲಹೆಹಗಾರರಾಗಿದ್ದಾರೆ' ಎಂದು ಅಲ್ಪಸಂಖ್ಯಾತ ಏಕತಾ ರಂಗದ ಜಂಟಿ ಸಂಯೋಜಕ ಮಹೀಂದ್ರ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಿಬ್ಬರ ಬಂಧನ: ದಾಸ್‌ ಹತ್ಯೆಗೆ ಸಂಬಂಧಿಸಿದಂತೆ ಅಪರಾಧ ವಿರೋಧಿ ಕ್ಷಿಪ್ರ ಕಾರ್ಯಪಡೆಯು 10 ಮಂದಿ ಶಂಕಿತರನ್ನು ಬಂಧಿಸಿದ್ದು, ಸೋಮವಾರ ಮತ್ತಿಬ್ಬರನ್ನು ಬಂಧಿಸಿದೆ.

ಗನ್‌ಮ್ಯಾನ್‌ ಭದ್ರತೆ: ಸಿಕ್ದರ್‌ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ, ಹೆಚ್ಚಿನ ಅಪಾಯ ಎದುರಿಸುತ್ತಿರುವ 20 ಮಂದಿಗೆ ಗನ್‌ಮ್ಯಾನ್‌ ಭದ್ರತೆ ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಇಲಾಖೆಯ ಸಲಹೆಗಾರ ಜಹಾಂಗೀರ್‌ ಆಲಮ್‌ ಚೌಧರಿ ತಿಳಿಸಿದ್ದಾರೆ.

20 ಮಂದಿಯಲ್ಲಿ ಎನ್‌ಸಿಪಿ ಪಕ್ಷದ ಆರು ಮುಖಂಡರು, ಮೀಸಲಾತಿ ವಿರೋಧಿ ಚಳವಳಿಯ ಮುಂಚೂಣಿ ಹೋರಾಟಗಾರರು ಸೇರಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries