ಬದಿಯಡ್ಕ: ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಹೈಯರ್ ಸೆಕೆಂಡರಿ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್.)ವಾರ್ಷಿಕ ಶಿಬಿರ ಶುಕ್ರವಾರ ಕಡಂಬಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೇಳದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು.
ಶಿಬಿರವನ್ನು ಬೆಳಿಗ್ಗೆ 9.20ಕ್ಕೆ ಮಹಾಜನ ಹೈಯರ್ ಸೆಕೆಂಡರಿ ಪ್ರಾಂಶುಪಾಲ ಸುಬ್ರಹ್ಮಣ್ಯನ್ ಎಂ. ಹಾಗೂ ಕಡಂಬಳ ಶಾಲಾ ಮುಖ್ಯೋಪಾಧ್ಯಾಯಿನಿ ದೇವಕಿ ಬಿ.ಧ್ವಜಾರೋಹಣಗೈಯ್ದು ಚಾಲನೆ ನೀಡಿದರು. ಬಳಿಕ ಜಿ.ಪಂ.ನೂತನ ಸದಸ್ಯ ರಾಮಪ್ಪ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು. ಮಹಾಜ ವಿದ್ಯಾಸಂಸ್ಥೆಗಳ ಪ್ರಬಂಧಕ ಜಯದೇವ ಖಂಡಿಗೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವಲಯ ಸಂಯೋಜಕ ಶ್ರೀನಾಥ್ ಇ. ಅವರು ಎನ್.ಎಸ್.ಎಸ್.ಸಂದೇಶ ವಾಚಿಸಿದರು. ವಿವಿಧ ವಲಯಗಳ ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದು ಶುಭಹಾರೈಸಿದರು. ಬಳಿಕ ವಿವಿಧ ತರಬೇತಿಗಳು, ಜಾಗೃತಿ ಚಟುವಟಿಕೆಗಳು, ಸೇವಾ ಚಟುವಟಿಕೆಗಳು ಮೊದಲಾದ ಕಾರ್ಯಕ್ರಮಗಳು ನಡೆದು ಜ.1 ರಂದು ಸಂಜೆ ಸಮಾರೋಪಗೊಳ್ಳಲಿದೆ.

.jpg)
.jpg)
.jpg)
