HEALTH TIPS

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಕೇಂದ್ರ ಸರ್ಕಾರ ಹೇಳಿದ್ದೇನು..?

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಡಾಕಾದ ನ್ಯಾಯಮಂಡಳಿ ಮರಣದಂಡನೆ ಶಿಕ್ಷೆಯನ್ನು ವಿಧಿಸಿರುವ ಹಿನ್ನೆಲೆಯಲ್ಲಿ, ಅವರು ಕಳೆದ ವರ್ಷದಿಂದ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಶೇಖ್ ಹಸೀನಾ ಭಾರತವನ್ನು ತೊರೆಯುವುದು ಅಥವಾ ಇಲ್ಲಿಯೇ ವಾಸ್ತವ್ಯ ಹೂಡುವುದು ಅವರ ವೈಯಕ್ತಿಕ ನಿರ್ಧಾರ.

"ಅವರು ಎಷ್ಟೇ ಸಮಯ ಬೇಕಾದರೂ ಇಲ್ಲಿಯೇ ಇರಬಹುದು" ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ, ಹೇಳಿದ್ದಾರೆ.

ಭಾರತವು ಶೇಖ್ ಹಸೀನಾಗೆ ಬಯಸಿದಷ್ಟು ಕಾಲ ಉಳಿಯಲು ಅವಕಾಶ ನೀಡುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ "ಅವರು ಒಂದು ನಿರ್ದಿಷ್ಟ ಸಂದರ್ಭದಲ್ಲಿ ಭಾರತಕ್ಕೆ ಬಂದರು, ಅದು ಅವರ ವೈಯಕ್ತಿಕ ನಿರ್ಧಾರ. ಇಲ್ಲಿಂದ ತೆರಳುವುದು ಕೂಡ ಅವರ ಆಯ್ಕೆ" ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ಬಾಂಗ್ಲಾದೇಶದಲ್ಲಿ ಉಂಟಾದ ರಾಜಕೀಯ ಅಶಾಂತಿಯ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿಕೊಂಡಿದ್ದರು. ಅವರ ಅಧಿಕಾರಾವಧಿಯಲ್ಲಿ ಉಂಟಾದ ಗಲಭೆಯಲ್ಲಿ ನೂರಾರು ಜನರು ಸಾವನ್ನಪ್ಪಿ, ಸಾವಿರಾರು ಜನರು ಗಾಯಗೊಂಡಿದ್ದರು. ಹೀಗಾಗಿ, ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿಯು ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. ಈ ಹಿನ್ನೆಲೆ, ಶೇಖ್ ಹಸೀನಾ ಭಾರತದ ಭದ್ರತೆಯಲ್ಲಿ ಇದ್ದು, ಅವರ ವಾಸ್ತವ್ಯ ಮತ್ತು ನಿರ್ಧಾರವು ಪ್ರಸ್ತುತ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries