HEALTH TIPS

ಲೋಕಸಭೆ: ನ್ಯಾ. ಸ್ವಾಮಿನಾಥನ್‌ ಪದಚ್ಯುತಗೊಳಿಸುವ ನೋಟಿಸ್ ಸಲ್ಲಿಕೆ ಸಾಧ್ಯತೆ

 ಚೆನ್ನೈ: ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್‌ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿದ ನೋಟಿಸ್‌ ಅನ್ನು ಇಂಡಿಯಾ ಮೈತ್ರಿಕೂಟದ ಸಂಸದರು ಲೋಕಸಭೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.


ಮಧುರೈ ಬಳಿಯ ತಿರುಪರನ್‌ಕುಂಡ್ರಂ ಬೆಟ್ಟದ ಕಲ್ಲಿನ ದೀಪಸ್ತಂಭ 'ದೀಪಥೋನ್‌'ನಲ್ಲಿ ಕಾರ್ತಿಕ ದೀಪ ಬೆಳಗಿಸಲು ಹೈಕೋರ್ಟ್‌ನ ನ್ಯಾಯಮೂರ್ತಿ ಜಿ.ಆರ್‌.ಸ್ವಾಮಿನಾಥನ್‌ ಅವರು ಭಕ್ತರಿಗೆ ಅವಕಾಶ ನೀಡಿ ಇತ್ತೀಚೆಗೆ ಆದೇಶ ಹೊರಡಿಸಿದ್ದರು.

ಅದೇ ಬೆಟ್ಟದಲ್ಲಿ ಸಿಕಂದರ್‌ ಬಾದುಶಾ ದರ್ಗಾ ಇದ್ದು, ಈ ಆದೇಶದಿಂದ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗಲಿದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿತ್ತು.

'ತಮಿಳುನಾಡು ಮತ್ತು ಇತರ ರಾಜ್ಯಗಳ ಕಾಂಗ್ರೆಸ್ ಸಂಸದರು ನೋಟಿಸ್‌ಗೆ ಸಹಿ ಹಾಕಿದ್ದಾರೆ' ಎಂದು ಮೂಲವೊಂದು ತಿಳಿಸಿದೆ. ನೋಟಿಸ್ ಸಲ್ಲಿಸಲು ಅಗತ್ಯವಿರುವ 100 ಸಂಸದರ ಬೆಂಬಲ ಸುಲಭವಾಗಿ ಸಿಗಲಿದೆ ಎಂಬ ವಿಶ್ವಾಸವನ್ನು ಡಿಎಂಕೆ ವ್ಯಕ್ತಪಡಿಸಿದೆ.

'ಡಿಎಂಕೆ ಸಂಸದರು ವಿರೋಧ ಪಕ್ಷಗಳ ಸದಸ್ಯರ ಬೆಂಬಲವನ್ನೂ ಕೋರುತ್ತಿದ್ದಾರೆ. ಲೋಕಸಭೆಯಲ್ಲಿ ಮಂಡಿಸಲಿರುವ ನೋಟಿಸ್‌ಅನ್ನು ಎಲ್ಲಾ ಪಕ್ಷಗಳು ಬೆಂಬಲಿಸುವ ವಿಶ್ವಾಸವಿದೆ. ನೋಟಿಸ್‌ಗೆ ಸಹಿ ಹಾಕಿರುವ ಸಂಸದರ ನಿಖರ ಸಂಖ್ಯೆಯನ್ನು ಮಂಗಳವಾರ ಬೆಳಿಗ್ಗೆ ಹೇಳಲು ಸಾಧ್ಯ' ಎಂದು ಮೂಲಗಳು ಹೇಳಿವೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries