HEALTH TIPS

ಚುನಾವಣೆ ವಿಳಂಬಗೊಂಡರೆ ರಾಷ್ಟ್ರವ್ಯಾಪಿ ಪ್ರತಿಭಟನೆ: ನೇಪಾಳದ ಮಾಜಿ ಪ್ರಧಾನಿ ಎಚ್ಚರಿಕೆ

ಕಠ್ಮಂಡು: ನೇಪಾಳದಲ್ಲಿ ಮಾರ್ಚ್ 5ರಂದು ನಿಗದಿಗೊಂಡಿರುವ ಸಾರ್ವತ್ರಿಕ ಚುನಾವಣೆಯನ್ನು ವಿಳಂಬಿಸಿದರೆ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ `ಪ್ರಚಂಡ' ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ರಚನೆಯಾದ ನೇಪಾಳಿ ಕಮ್ಯುನಿಸ್ಟ್ ಪಾರ್ಟಿ(ಎನ್ಸಿಪಿ)ಯ ಸಂಯೋಜಕರಾಗಿರುವ `ಪ್ರಚಂಡ' ಕಠ್ಮಂಡುವಿನಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ಹಾಳು ಮಾಡಲು ಪ್ರತಿಗಾಮಿ ಶಕ್ತಿಗಳು ಪ್ರಯತ್ನಿಸುತ್ತಿವೆ. ಭದ್ರತಾ ಕಾಳಜಿ, ಈಗ ನಡೆಯುತ್ತಿರುವ ರಾಜಪ್ರಭುತ್ವದ ಪರವಾದ ಪ್ರದರ್ಶನಗಳನ್ನು ನೆಪವಾಗಿಸಿ ಚುನಾವಣೆ ಮುಂದೂಡುವುದನ್ನು ತಮ್ಮ ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries