HEALTH TIPS

ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಹಿಜ್ಬುಲ್‌ ಮುಖ್ಯಸ್ಥನ ಪುತ್ರರ ಅರ್ಜಿ ವಜಾ

ನವದೆಹಲಿ: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಮುಖ್ಯಸ್ಥ ಸೈಯದ್‌ ಸಲಾಹುದ್ದೀನ್‌ ಅವರ ಪುತ್ರರಿಬ್ಬರು ಮತ್ತು ಇತರರ ವಿರುದ್ಧ ದೋಷಾರೋಪ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ವಿವೇಕ್‌ ಚೌಧರಿ ಮತ್ತು ಮನೋಜ್‌ ಜೈನ್‌ ಅವರ ನೇತೃತ್ವದ ನ್ಯಾಯಪೀಠವು ಮಂಗಳವಾರ ಆರೋಪಿಗಳ ಮನವಿಯನ್ನು ತಿರಸ್ಕರಿಸಿದೆ.

ವಿಚಾರಣಾ ನ್ಯಾಯಾಲಯವೊಂದು 2021ರಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ‍ ಮಾಡಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

2011ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲಾಹುದ್ದೀನ್‌ ಪುತ್ರರಾದ ಶಹೀದ್‌ ಯೂಸುಫ್‌ನನ್ನು 2017ರಲ್ಲಿ ಮತ್ತು ಸೈಯದ್‌ ಅಹ್ಮದ್‌ ಶಕೀಲ್‌ನನ್ನು 2018ರಲ್ಲಿ ಬಂಧಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries