ಕಾಸರಗೋಡು: ನಗರದ ಶ್ರೀ ಧರ್ಮ ಶಾಸ್ತಾ ಸೇವಾ ಸಂಘದ ಆಶ್ರಯದಲ್ಲಿ ಜರಗುವ 60 ನೇ ವರ್ಷದ ಶಬರಿಮಲೆ ಶ್ರೀ ಅಯ್ಯಪ್ಪ ದೀಪೆÇೀತ್ಸವದ ಅಂಗವಾಗಿ ಲಕ್ಷಾರ್ಚನೆ ಕಾರ್ಯಕ್ರಮ ಶುಕ್ರವಾರ ಜರುಗಿತು. ಕಣಿಪುರ ಹರಿನಾರಾಯಣ ಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಂದಿರದ ಗುರುಸ್ವಾಮಿಗಳಾದ ಬಾಲಕೃಷ್ಣ ಸ್ವಾಮಿ, ಸಮಿತಿಯ ಕಾರ್ಯಾಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಸುರೇಶ್ ಸುವರ್ಣ, ಕಾರ್ಯದರ್ಶಿ ಮಹೇಶ ನೆಲ್ಲಿಕುಂಜೆ, ಕೋಶಾಧಿಕಾರಿ ಲವ ಮೀಪುಗುರಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


