ರಾಯ್ಪುರ: ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಜಯಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡವು ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು.
50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡ ಭಾರತ ತಂಡವು 358 ರನ್ ಗಳಿಸಿತು. ವಿರಾಟ್ ಕೊಹ್ಲಿ, ಋತುರಾಜ್ ಶತಕ ಗಳಿಸಿದರು.
359 ರನ್ ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು 6 ವಿಕೆಟ್ ಗಳ ನಷ್ಟಕ್ಕೆ 362 ರನ್ ಗಳಿಸಿ ಜಯಭೇರಿ ಬಾರಿಸಿದೆ.




