HEALTH TIPS

ಶಬರಿಮಲೆ ಚಿನ್ನಕಳವು ಪ್ರಕರಣ: SITತನಿಖೆಯಲ್ಲಿ ಗೃಹ ಇಲಾಖೆ ಹಸ್ತಕ್ಷೇಪ: ಕಾಂಗ್ರೆಸ್

ಕೊಚ್ಚಿ: 'ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಕುರಿತು ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ರಾಜ್ಯ ಗೃಹ ಇಲಾಖೆ ನಿಯಂತ್ರಿಸುತ್ತಿದೆ' ಎಂದು ವಿರೋಧ ಪಕ್ಷ ಕಾಂಗ್ರೆಸ್‌ ಸೋಮವಾರ ಆರೋಪಿಸಿದೆ.

'ಎಸ್‌ಐಟಿಯು ಪ್ರಕರಣದ ನಿಜವಾದ ಆರೋಪಿಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ.

ಎಸ್‌ಐಟಿ ತನಿಖೆಯ ಪ್ರಗತಿ ಬಗ್ಗೆ ಕೇರಳ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್‌ ಹೇಳಿದರು.

'ಈ ಪ್ರಕರಣದಲ್ಲಿ ಮತ್ತಷ್ಟು ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯವೇ ಹೇಳಿದೆ. ಅವರನ್ನು ಇನ್ನೂ ಬಂಧಿಸಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ, ಇದು ಸಂಘಟಿತ ಕಳ್ಳತನ ಪ್ರಕರಣವಾಗಿದೆ' ಎಂದು ದೂರಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries