HEALTH TIPS

Tiger Census ನಡೆಸುತ್ತಿದ್ದಾಗ ಕಾಡಾನೆ ದಾಳಿ; ಪಾಲಕ್ಕಾಡ್ ಅರಣ್ಯಾಧಿಕಾರಿ ಮೃತ್ಯು

ತಿರುವನಂತಪುರಂ: ಹುಲಿ ಗಣತಿ ನಡೆಸುತ್ತಿದ್ದ ಅರಣ್ಯ ಅಧಿಕಾರಿಯೋರ್ವರನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಅರಣ್ಯ ಇಲಾಖೆ ಅಧಿಕಾರಿಯನ್ನು ಕಾಳಿಮುತ್ತು (52) ಎಂದು ಗುರುತಿಸಲಾಗಿದೆ.

ಕಾಳಿ ಮುತ್ತು ಸೇರಿದಂತೆ ಮೂವರು ವನ್ಯಜೀವಿ ಅಧಿಕಾರಿ ಗಣತಿ ಪ್ರಕ್ರಿಯೆ ನಡೆಸುತ್ತಿರುವಾಗ ಅಟ್ಟಪಾಡಿ ಅರಣ್ಯ ವಲಯದ ಒಳಗೆ ಈ ಘಟನೆ ನಡೆದಿದೆ.

ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭ ಕಾಡಾನೆ ವನ್ಯಜೀವಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭ ಎಲ್ಲರೂ ಓಡಿದ್ದಾರೆ. ಘಟನೆಯಲ್ಲಿ ಇಬ್ಬರು ಅಧಿಕಾರಿಗಳು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಆದರೆ, ಕಾಳಿಮುತ್ತು ಅವರ ಮೃತದೇಹದ ಸಮೀಪದ ಪ್ರದೇಶದಲ್ಲಿ ಅನಂತರ ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಕಾಳಿಮುತ್ತು ಅಗಲಿಯ ನೆಲ್ಲಿಪಥಿ ಬುಡಕಟ್ಟು ಪ್ರದೇಶದ ನಿವಾಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries