HEALTH TIPS

"Vote chori" ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ನುಸುಳುಕೋರರನ್ನು ರಕ್ಷಿಸುವ ಪ್ರಯತ್ನ ಎಂದ ಬಿಜೆಪಿ!

ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಈ ಹೋರಾಟ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದೆ.

ಭಾರತದ ಪ್ರಜಾಪ್ರಭುತ್ವ ಸದೃಢವಾಗಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಜನರನ್ನು ದಾರಿತಪ್ಪಿಸುವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು "ಅವಮಾನಿಸುವ ಮತ್ತು ಮಾನಹಾನಿ ಮಾಡುವ ಸಂಚಿನಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಸುಧಾರಣೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ತಮ್ಮ ವಿರುದ್ಧದ ಸುಳ್ಳು ಆರೋಪಗಳಿಗೆ ಪಾಯಿಂಟ್-ಬೈ-ಪಾಯಿಂಟ್ ಪ್ರತ್ಯಾರೋಪದ ಮೂಲಕ ವಿಪಕ್ಷಗಳಿಗೆ ಮುಖಭಂಗ ಉಂಟು ಮಾಡಿದ್ದರು. ಇದಕ್ಕಾಗಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries