ಉಪ್ಪಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಸಂಸ್ಥೆಯ ಉಪ್ಪಳ ಘಟಕದ ವಾರ್ಷಿಕೋತ್ಸವ ಜ. 12 ಸೋಮವಾರ ಕುಳೂರಿನ ಶ್ರೀ ಹರಿಭಜನಾ ಮಂದಿರದ ವಠಾರದಲ್ಲಿ ಜರಗಲಿದೆ.
ಸಂಜೆ 6.30 ರಿಂದ ಜರಗುವ ವಾರ್ಷಿಕೋತ್ಸವದಲ್ಲಿ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ 'ಶ್ರೀದೇವಿ ಲಲಿತೋಪಖ್ಯಾನ' ಜರಗಲಿದೆ.
ವಾರ್ಷಿಕೋತ್ಸವ ಸಲುವಾಗಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪ್ಪಳ ಘಟಕದ ಗೌರವಾಧ್ಯಕ್ಷ ಪಿ.ಆರ್.ಶೆಟ್ಟಿ ಪೆÇಯ್ಯೇಲು ಕುಳೂರು ಸಭಾಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಸಮಿತಿಯ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಅಧ್ಯಕ್ಷ ಸತೀಶ ಶೆಟ್ಟಿ ಪಟ್ಲ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡು ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಉದ್ಯಮಿ ಮೋಹನ ಶೆಟ್ಟಿ ಮಜ್ಜಾರು, ಶ್ರೀಹರಿ ಭಜನಾ ಮಂದಿರದ ಕಾರ್ಯಾಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು, ಅಧ್ಯಕ್ಷೆ ಕೃಷ್ಣವೇಣಿ ಶೆಟ್ಟಿ ಪಾದೆ, ಪಟ್ಲ ಫೌಂಡೇಶನ್ ಉಪ್ಪಳ ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ನಿಕಟಪೂರ್ವ ಅಧ್ಯಕ್ಷ ಸುರೇಶ ಶೆಟ್ಟಿ ಬಳಕ ಕುಂಜತ್ತೂರು ಗೌರವ ಉಪಸ್ಥಿತರಿರುವರು. ಸಮಾರಂಭದಲ್ಲಿ ಪ್ರಸಂಗಕರ್ತ, ಬರಹಗಾರ ಯೋಗೀಶ ರಾವ್ ಚಿಗುರುಪಾದೆ ಅವರಿಗೆ ಗೌರವಾರ್ಪಣೆ ಜರಗಲಿದೆ ಎಂದು ಪಟ್ಲ ಫೌಂಡೇಶನ್ ಉಪ್ಪಳ ಘಟಕದ ಪ್ರಕಟಣೆ ತಿಳಿಸಿದೆ.

