ಮುಳ್ಳೇರಿಯ: ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಫೆ. 22 ರಿಂದ 27 ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಸಮಿತಿಯ ಪದಾಧಿಕಾರಿಗಳು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸೇವಾ ಸಮಿತಿ ಅಧ್ಯಕ್ಷ ಸದಾನಂದ ಅಡ್ಕ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವರಾಮಣಿ ಆಣಿ, ಕಾರ್ಯದರ್ಶಿ ಜಯಕರ ಎಂ., ಕೋಶಾಧಿಕಾರಿ ನಾರಾಯಣ ಕೇಕಡ್ಕ, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಅಖಿಲೇಶ್ ನಗಮಗಂ, ಸಮಿತಿ ಸದಸ್ಯರಾದ ಗೋಕುಲ ಯಾದವ್, ರೋಹಿತಾಕ್ಷ, ಮಧುರಾಜ್ ಮುಂತಾದವರು ಉಪಸಿತರಿದ್ದರು.

.jpg)
