ಬೆಂಗಳೂರು: ಇಂದಿನಿಂದ (ಜ. 22) ಆರಂಭವಾಗುವ ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಅಲ್ಲಿಯ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರ ನಡೆ ಕುತೂಹಲ ಮೂಡಿಸಿದೆ.
ಜ.31ರವರೆಗೆ ವಿಧಾನಸಭೆ ಜಂಟಿ ಅಧಿವೇಶನ ನಡೆಯಲಿದೆ.
ಜಂಟಿ ಅಧಿವೇಶನದ ಜೊತೆಗೆ ನರೇಗಾ ಹೆಸರನ್ನು ಬದಲಾಯಿಸಿರುವ ಕೇಂದ್ರದ ತೀರ್ಮಾನದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನೂ ಕರ್ನಾಟಕ ಸರ್ಕಾರ ಕರೆದಿದೆ.

