HEALTH TIPS

ತೀವ್ರ ಶೀತಗಾಳಿ, ದಟ್ಟ ಮಂಜು: ಜಾರ್ಖಂಡ್‌ ಶಾಲೆಗಳಿಗೆ ರಜೆ

 ರಾಂಚಿ: ತೀವ್ರ ಶೀತಗಾಳಿ ಹಾಗೂ ದಟ್ಟ ಮಂಜಿನ ವಾತಾವರಣ ಇರಲಿರುವ ಕಾರಣ ಜ.6ರಿಂದ 8ರವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಜಾರ್ಖಂಡ್‌ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾರಕ್ಷತಾ ಇಲಾಖೆಯು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. 


ಸರ್ಕಾರಿ-ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳು (ಅಲ್ಪಸಂಖ್ಯಾತ ಶಾಲೆಗಳೂ ಸೇರಿ) ಜ.6ರಿಂದ 8ರವರೆಗೆ ಮುಚ್ಚಿರುತ್ತವೆ ಎಂದು ತಿಳಿಸಲಾಗಿದೆ.

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಂದ 12ನೇ ತರಗತಿಯ ವಿದ್ಯಾರ್ಥಿಗಳವರೆಗೂ ಈ ಆದೇಶ ಅನ್ವಯಿಸಲಿದೆ. ಶಾಲೆ ಮುಚ್ಚಿರುವ ಈ ಅವಧಿಯಲ್ಲಿ ಯಾವುದೇ ನಿಯಮಿತ ಶೈಕ್ಷಣಿಕ ಚಟುವಟಿಕೆ ನಡೆಯುವುದಿಲ್ಲ ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆದರೆ, ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಶಾಲೆಗೆ ಹಾಜರಾಗಿ ತಮಗೆ ವಹಿಸಲಾದ ಪಠ್ಯೇತರ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದೂ ಇಲಾಖೆ ಸ್ಪಷ್ಟಪಡಿಸಿದೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries