HEALTH TIPS

ಮದ್ರಾಸ್‌ ವಿ.ವಿ. ಘಟಿಕೋತ್ಸವ ಬಹಿಷ್ಕರಿಸಿದ ಸಚಿವ ಚೆಳಿಯನ್

ಚೆನ್ನೈ: ತಮಿಳುನಾಡು ಉನ್ನತ ಶಿಕ್ಷಣ ಸಚಿವ ಗೋವಿ ಚೆಳಿಯನ್‌ ಅವರು ಗುರುವಾರ ರಾಜ್ಯಪಾಲ ಆರ್‌.ಎನ್‌.ರವಿ ಅವರು ಅಧ್ಯಕ್ಷತೆ ವಹಿಸಿದ್ದ ಮದ್ರಾಸ್‌ ವಿಶ್ವವಿದ್ಯಾಲಯದ 167ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.

'ರಾಜ್ಯಪಾಲರು ಚುನಾಯಿತ ಸರ್ಕಾರದ ವಿರುದ್ಧ ನಡೆದುಕೊಳ್ಳುತ್ತಿದ್ದು, ಪದವಿ ಪ್ರದಾನ ಮಾಡಲು ರಾಜ್ಯಪಾಲರಿಗೆ ಯಾವುದೇ ಅರ್ಹತೆ ಇಲ್ಲ' ಎಂದು ತಿಳಿಸಿದ್ದಾರೆ.

'ರಾಜ್ಯಪಾಲ ಆರ್‌.ಎನ್‌.ರವಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವ ಯಾವುದೇ ಅರ್ಹತೆ ಹೊಂದಿಲ್ಲ. ಹೀಗಾಗಿ, ಮದ್ರಾಸ್‌ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮದಿಂದಲೇ ದೂರ ಉಳಿಯುತ್ತೇನೆ' ಎಂದು ಚೆಳಿಯನ್‌ ಅವರು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆ ಅಧಿವೇಶನದ ಮೊದಲ ದಿನ ರಾಜ್ಯಪಾಲ ಆರ್‌.ಎನ್‌.ರವಿ ಅವರು ಭಾಷಣ ಮಾಡದೇ, ಹೊರ ನಡೆದಿದ್ದನ್ನು ಟೀಕಿಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಹೊರಿಸುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

'ರಾಜ್ಯಪಾಲರು ಚುನಾಯಿತ ಸರ್ಕಾರ ಹಾಗೂ ಸಂವಿಧಾನದ ವಿರುದ್ಧ ನಡೆದುಕೊಂಡಿದ್ದಾರೆ. ರವಿ ಅವರು ಸದನದ ಘನತೆಗೆ ಕುಂದುತಂದಿದ್ದು, ತಮಿಳು ಭಾಷೆ ಹಾಗೂ ತಮಿಳರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ' ಎಂದು ದೂರಿದ್ದಾರೆ.

ಘಟಿಕೋತ್ಸವವು ಗುರುವಾರ ಬೆಳಿಗ್ಗೆ 10.30ಕ್ಕೆ ಕುಲಪತಿ ಅವರ ಅನುಪಸ್ಥಿತಿಯಲ್ಲಿ ನಡೆಯಿತು. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಪಿ.ಶಂಕರ್‌ ಅವರು ಪ್ರಮಾಣಪತ್ರಗಳಿಗೆ ಸಹಿ ಹಾಕಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries