HEALTH TIPS

ತಿರುಪತಿ ಲಡ್ಡು ಪ್ರಕರಣ: ಎಸ್‌ಐಟಿಯಿಂದ ತನಿಖೆ ಪೂರ್ಣ

ಹೈದರಾಬಾದ್‌: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ ನೇಮಿಸಿರುವ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪೂರ್ಣಗೊಳಿಸಿದೆ.

12 ರಾಜ್ಯಗಳಲ್ಲಿ ಸತತ 15 ತಿಂಗಳು ತನಿಖೆ ನಡೆಸಿರುವ ತನಿಖಾ ತಂಡವು, ನೆಲ್ಲೂರ್‌ ಎಸಿಬಿ ಕೋರ್ಟ್‌ನಲ್ಲಿ ಶುಕ್ರವಾರ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಉತ್ತರಾಖಂಡದ ಭೋಲೆ ಬಾಬಾ ಸಾವಯವ ಡೇರಿ ನಿರ್ದೇಶಕರಾದ ಪೋಮಿಲ್‌ ಜೈನ್‌ ಮತ್ತು ವಿಪಿನ್‌ ಜೈನ್‌ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳನ್ನಾಗಿಸಲಾಗಿದೆ. ದೋಷಾರೋಪ ಪಟ್ಟಿಯಲ್ಲಿ 36 ಆರೋಪಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಅಷ್ಟೂ ಜನರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಜಾಮೀನು ಲಭ್ಯವಾಗದೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಾಜಿ ಪ್ರಧಾನ ವ್ಯವಸ್ಥಾಪಕರು ಸೇರಿದಂತೆ ಟಿಟಿಡಿ ಹಿರಿಯ ಅಧಿಕಾರಿಗಳು ನೆಲ್ಲೋರ್‌ ಕೇಂದ್ರೀಯ ಕಾರಾಗೃಹದಲ್ಲಿದ್ದಾರೆ. ಜೊತೆಗೆ ಟಿಟಿಡಿ ಮಾಜಿ ಮುಖ್ಯಸ್ಥರ ನಿಕಟವರ್ತಿ ಚಿನ್ನ ಅಪ್ಪಣ್ಣ ಮತ್ತು ಅಜಯ್‌ ಕುಮಾರ್‌ ಸುಗಂಧ ಅವರೂ ಜೈಲಿನಲ್ಲಿದ್ದಾರೆ. ಹಲವು ಡೇರಿಗಳ ಮಾಲೀಕರಿಗೆ ಷರತ್ತುಬದ್ಧ ಜಾಮೀನು ಲಭಿಸಿದ್ದು, ನಿಗದಿತ ದಿನಾಂಕಗಳಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಆರೋಪಿಗಳು ಹಸುವಿನ ಶುದ್ಧ ತುಪ್ಪದ ಬದಲಿಗೆ ಕೋಲ್ಕತ್ತದ ಬ್ಯೂಜ್‌ ಬಡ್ಜ್‌ ಕಂಪನಿಯಿಂದ ಪಡೆದ ಪಾಮ್‌ ಆಯಿಲ್‌, ಪಾಮ್‌ ಕರ್ನಲ್‌ ಎಣ್ಣೆ ಮತ್ತು ಪಾಮೊಲಿನ್‌ನಂತಹ ಕಲಬೆರಕೆ ವಸ್ತುಗಳನ್ನು ಬಳಸಿದ್ದಾರೆ. ಈ ವಸ್ತುಗಳನ್ನು ಅಲ್ಪ ಪ್ರಮಾಣದ ಶುದ್ಧ ತುಪ್ಪ, ಬೀಟಾ-ಕೆರೋಟಿನ್‌, ಅಸಿಟಿಕ್‌ ಆಯಸಿಡ್‌ ಎಸ್ಟರ್‌ ಮತ್ತು ಸಿಂಥೆಟಿಕ್‌ ತುಪ್ಪದ ಸುವಾಸನೆಯಂತಹ ರಾಸಾಯನಿಕಗಳೊಂದಿಗೆ ಮಿಶ್ರಣ ಮಾಡಲಾಗುತ್ತಿತ್ತು ಎಂದು ತನಿಖೆಯಲ್ಲಿ ಗೊತ್ತಾಗಿದೆ.

'ಕಳೆದ ವರ್ಷ ಫೆಬ್ರುವರಿಯಿಂದ ಬಂಧನದಲ್ಲಿರುವ ಪೋಮಿಲ್‌ ಜೈನ್‌ ಮತ್ತು ವಿಪಿನ್ ಜೈನ್, ಉತ್ತರಾಖಂಡದ ರೂರ್ಕಿ ಬಳಿಯ ಭಗವಾನ್‌ಪುರದಲ್ಲಿರುವ ತಮ್ಮ ಡೇರಿ ಘಟಕದಲ್ಲಿ ಕಲಬೆರಕೆ ತುಪ್ಪ ತಯಾರಿಸುತ್ತಿದ್ದರು' ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್‌ 2024ರ ಅಕ್ಟೋಬರ್‌ನಲ್ಲಿ ಎಸ್‌ಐಟಿ ರಚಿಸಿತ್ತು. ಐವರು ಸದಸ್ಯರ ತನಿಖಾ ತಂಡವು ಇಬ್ಬರು ಸಿಬಿಐ ಅಧಿಕಾರಿಗಳನ್ನು ಒಳಗೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries