ಬದಿಯಡ್ಕ: ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಮಣ್ಯ ಸ್ವಾಮೀ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ದಿನಾಚರಣೆ ಮಂಗಳವಾರ ದೇಲಂಪಾಡಿ ಬ್ರಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಜರಗಿತು.
ಬೆಳಿಗ್ಗೆ ಮಹಾಗಣಪತಿ ಹವನ, ನವಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಸಂಜೆ 6 ರಿಂದ ಶ್ರೀ ಧರ್ಮಶಾಸ್ತಾ ಮಹಿಳಾ ಭಜನಾ ಸಂಘ ನೀರ್ಚಾಲು ಇವರಿಂದ ಭಜನೆ, ರಾತ್ರಿ ಶ್ರೀ ದೇವರಿಗೆ ವಿಶೇಷ ಕಾರ್ತಿಕೋತ್ಸವ, ಪ್ರಸಾದ ವಿತರಣೆ ಜರಗಿತು. ನೂರಾರು ಭಕ್ತ ಜನರು ಪಾಲ್ಗೊಂಡರು.

.jpg)
.jpg)
.jpg)
