HEALTH TIPS

ಬಾಂಗ್ಲಾದೇಶದಲ್ಲಿ ಪರಸ್ಪರ ಕೈಕುಲುಕಿದ ಭಾರತ-ಪಾಕ್ ಸರ್ಕಾರದ ನಾಯಕರು

ಢಾಕಾ: ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಸಂಕ್ಷಿಪ್ತ ಸಂವಾದ ನಡೆಸಿದ್ದಾರೆ ಎಂದು ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿ ಕಾರ್ಯಾಲಯ ತಿಳಿಸಿದೆ. 

'ಆಪರೇಷನ್ ಸಿಂಧೂರ' ಬಳಿಕ ಉಭಯ ದೇಶಗಳ ಉನ್ನತ ಮಟ್ಟದ ನಾಯಕರು ಇದೇ ಮೊದಲ ಬಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಢಾಕಾಗೆ ತೆರಳಿದ್ದರು. ಅಲ್ಲಿ ಉಭಯ ರಾಷ್ಟ್ರಗಳ ನಾಯಕರ ಭೇಟಿ ನಡೆದಿದೆ.

ಪುಸ್ತಕದಲ್ಲಿ ಸಂತಾಪ ಉಲ್ಲೇಖಿಸುವ ಸಲುವಾಗಿ ಬಾಂಗ್ಲಾದೇಶದ ಸಂಸತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಿಧ ದೇಶಗಳ ಸಮ್ಮಖದಲ್ಲಿ ಸಾದಿಕ್ ಅವರನ್ನು ಜೈಶಂಕರ್ ಅವರು ಭೇಟಿಯಾಗಿ ಕೈಕುಲುಕಿದರು ಎಂದು ಪಾಕ್‌ನ ನ್ಯಾಷನಲ್ ಅಸೆಂಬ್ಲಿ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.

ಶಾಂತಿ ಮಾತುಕತೆಗೆ ಪಾಕಿಸ್ತಾನ ನಿರಂತರ ಒತ್ತು ನೀಡುತ್ತಿದೆ ಎಂದೂ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಕಳೆದ ವರ್ಷ ಮೇ ತಿಂಗಳಲ್ಲಿ ಭಾರತ 'ಆಪರೇಷರ್ ಸಿಂಧೂರ' ಕಾರ್ಯಾಚರಣೆಯನ್ನು ನಡೆಸಿತ್ತು. ಇದರಿಂದಾಗಿ ಉಭಯ ದೇಶಗಳ ನಡುವಣ ಬಾಂಧವ್ಯ ಸಂಪೂರ್ಣವಾಗಿ ಕಡಿದುಕೊಂಡಿತ್ತು.

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್ ಅವರ ಕಚೇರಿಯು ಸಾಮಾಜಿಕ ಮಾಧ್ಯಮದಲ್ಲಿ ಜೈಶಂಕರ್ ಹಾಗೂ ಸಾದಿಕ್ ಅವರ ಚಿತ್ರವನ್ನು ಹಂಚಿಕೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries