HEALTH TIPS

ಇಂದೋರ್ ಕಲುಷಿತ ನೀರಿನ ದುರಂತ: ಸಂತ್ರಸ್ತರು, ಕುಟುಂಬಗಳನ್ನು ಭೇಟಿಯಾದ ರಾಹುಲ್

ಇಂದೋರ್: ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಹಲವು ಮಂದಿ ಮೃತಪಟ್ಟು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶದ ಇಂದೋರ್‌ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 4 ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.

ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಮತ್ತು ಪಕ್ಷದ ಮುಖಂಡ ಉಮಂಗ್ ಸಿಂಗಾರ್ ರಾಹುಲ್ ಜೊತೆಗಿದ್ದರು.

ಕಲುಷಿತ ನೀರಿನ ದುರಂತ ಸಂಭವಿಸಿದ ಭಗೀರಥಪುರ ಪ್ರದೇಶಕ್ಕೂ ಭೇಟಿ ನೀಡಿದ ರಾಹುಲ್, ಮೃತರ ಸಂಬಂಧಿಕರನ್ನು ಭೇಟಿಯಾಗಿ ಸಂತೈಸಿದರು.

ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಭೇದಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಭಗೀರಥಪುರದ ನಿವಾಸಿಗಳು ರಾಹುಲ್‌ಗೆ ತಿಳಿಸಿದ್ದಾರೆ. ಆದರೆ, ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಧ್ಯ ಪ್ರದೇಶ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ವೈದ್ಯರ ತಂಡ ನಡೆಸಿದ ಆಡಿಟ್‌ನಲ್ಲಿ 15 ಮಂದಿ ಮಾತ್ರ ವಾಂತಿ ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.

ಮೃತರ ಕುಟುಂಬಗಳಿಗೆ ಸರ್ಕಾರ ತಲಾ ₹2 ಲಕ್ಷ ಪರಿಹಾರ ನೀಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries