HEALTH TIPS

ಕೋವಿಡ್ ಪರಿಹಾರ: ಆರ್‌ಟಿಪಿಸಿಆರ್‌ ವರದಿಯಷ್ಟೆ ಮಾನದಂಡವಲ್ಲ ಎಂದ ಬಾಂಬೆ ಹೈಕೋರ್ಟ್‌

 ಮುಂಬೈ: ಇತರ ಎಲ್ಲ ವರದಿಗಳಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದ್ದರೂ, ಆರ್‌ಟಿಪಿಸಿಆರ್‌ ವರದಿಯಲ್ಲಿ ಸೋಂಕು ದೃಢಪಟ್ಟಿಲ್ಲ ಎಂಬುದು ಪರಿಹಾರ ನಿರಾಕರಣೆಗೆ ಮಾನದಂಡವಾಗಬಾರದು ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಆರೋಗ್ಯ ಕಾರ್ಯಕರ್ತೆಯಾಗಿದ್ದ ತನ್ನ ಪತ್ನಿಯನ್ನು ಕೋವಿಡ್ ಸೋಂಕಿನಿಂದಾಗಿ ಕಳೆದುಕೊಂಡ ವ್ಯಕ್ತಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ₹50 ಲಕ್ಷ  


'ಮೃತ ಮಹಿಳೆ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು ಎಂಬುದನ್ನು ದೃಢಪಡಿಸುವ ಆರ್‌ಟಿಪಿಸಿಆರ್‌ ವರದಿಯನ್ನು ನೀಡಿಲ್ಲ ಎಂಬ ಏಕೈಕ ಕಾರಣಕ್ಕೆ ಪರಿಹಾರ ವಿತರಣೆಯನ್ನು ನಿರಾಕರಿಸಿರುವುದು ಸರಿಯಲ್ಲ' ಎಂದು ನ್ಯಾಯಮೂರ್ತಿಗಳಾದ ಅರುಣ್ ಪೆಡ್ನೆಕರ್ ಮತ್ತು ವೈಶಾಲಿ ಜಾಧವ್‌ ಅವರ ಪೀಠ ಹೇಳಿದೆ.

ಇತರ ವೈದ್ಯಕೀಯ ದಾಖಲೆಗಳಾದ ಸಿ.ಟಿ. ಸ್ಕ್ಯಾನ್ ವರದಿ, ಆಮ್ಲಜನಕ ಮಟ್ಟ ಮತ್ತು ಮರಣ ಪ್ರಮಾಣಪತ್ರವು ಮಹಿಳೆ ಕೋವಿಡ್‌ನಿಂದ ಮೃತಪಟ್ಟಿರುವುದನ್ನು ದೃಢಪಡಿಸಿದೆ. ಹಾಗಾಗಿ ಕೋವಿಡ್‌ ಸೋಂಕನ್ನು ನಿರ್ಧರಿಸಲು ಆರ್‌ಟಿಪಿಸಿಆರ್‌ ಒಂದೇ ಮಾನದಂಡವಲ್ಲ' ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕೋವಿಡ್‌ ಸೋಂಕಿನ ಸಂದರ್ಭದಲ್ಲಿ ಮೃತಪಟ್ಟ ಕೋವಿಡ್‌-19 ವಾರಿಯರ್ಸ್, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸರ್ಕಾರ ಪರಿಹಾರ ನೀಡಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries